ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ವಿವಿಧ ಬಗೆಯ ರುಚಿಕರ ಬೋಂಡಾಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
September 27, 2021
in Cooking, Newsbeat, ಅಡುಗೆ
Saakshatv cooking recipe how to prepare shavige alu bonda
Share on FacebookShare on TwitterShare on WhatsappShare on Telegram

5 ವಿವಿಧ ಬಗೆಯ ರುಚಿಕರ ಬೋಂಡಾಗಳ ರೆಸಿಪಿಗಳು ನಿಮಗಾಗಿ..!

1. ಮಂಗಳೂರು ಬಿಸ್ಕೂಟ್ ಅಂಬಡೆ

Related posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

February 16, 2026
What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

February 16, 2026

ಬೇಕಾಗುವ ಸಾಮಗ್ರಿಗಳು:

1¼ ಕಪ್ ಸ್ವಚ್ಛಗೊಳಿಸಿದ ಉದ್ದಿನ ಬೇಳೆ

ನುಣ್ಣಗೆ ಕತ್ತರಿಸಿದ 2 – 3 ಹಸಿರು ಮೆಣಸಿನಕಾಯಿಗಳು
ಸಣ್ಣದಾಗಿ ಕತ್ತರಿಸಿದ 1 ಇಂಚಿನ ಶುಂಠಿ ತುಂಡು
ಕರಿಬೇವಿನ ಸೊಪ್ಪು ಸುಮಾರು 10 – 12 ಎಲೆಗಳು ಚಿಕ್ಕದಾಗಿ ಕತ್ತರಿಸಿ ಇಟ್ಟು ಕೊಳ್ಳಿ. Mangalore biscuit ambade recipes

1/2 ಟೀಸ್ಪೂನ್ ತಾಜಾ ಕರಿಮೆಣಸು ಹುಡಿ
ರುಚಿಗೆ ತಕ್ಕಷ್ಟು ಉಪ್ಪು
2 ಟೀಸ್ಪೂನ್ ತುರಿದ ಕೊಬ್ಬರಿ
ಹುರಿಯಲು ಸಾಕಷ್ಟು ಎಣ್ಣೆ

Saakshatv cooking recipes biscuit ambade

ಮಾಡುವ ವಿಧಾನ :

ಸ್ವಚ್ಛಗೊಳಿಸಿದ ಉದ್ದಿನ ಬೇಳೆಯನ್ನು ಕನಿಷ್ಠ 2 – 3 ಗಂಟೆಗಳ ಕಾಲ ನೆನೆಸಿ, ನಂತರ ನೀರನ್ನು ಬಸಿಯಿರಿ.

ಬ್ಲೆಂಡರ್ ಅಥವಾ ಗ್ರೈಂಡರ್ನಲ್ಲಿ, ಉದ್ದಿನ ಬೇಳೆಯನ್ನು ಉಪ್ಪಿನೊಂದಿಗೆ ಹೆಚ್ಚು ನೀರು ಸೇರಿಸದೆ ಚೆನ್ನಾಗಿ ರುಬ್ಬಿ.
ನಂತರ ಕತ್ತರಿಸಿದ ಹಸಿ ಮೆಣಸಿನಕಾಯಿ, ಕರಿಬೇವಿನ ಎಲೆಗಳು, ಕರಿಮೆಣಸು ಹುಡಿ ಮತ್ತು ಕೊಬ್ಬರಿ ತುರಿ ಉದ್ದಿನ ಬೇಳೆ ಹಿಟ್ಟಿಗೆ ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿ. ಹಿಟ್ಟನ್ನು 30 ನಿಮಿಷಗಳ ಕಾಲ ಹಾಗೆ ಬಿಡಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ . (ಹಿಟ್ಟಿಗೆ ನೀರು ಹೆಚ್ಚಾದರೆ ಅಕ್ಕಿ ಹುಡಿ ಸೇರಿಸಿಕೊಳ್ಳಬಹುದು) ಈಗ ದೊಡ್ಡ ಲಿಂಬೆ ಗಾತ್ರದ ಉಂಡೆಗಳನ್ನು ಮಾಡಿ.

2. ಮಂಗಳೂರು ಗೋಳಿ ಬಜೆ

ಬೇಕಾಗುವ ಸಾಮಗ್ರಿಗಳು

11/2 ಕಪ್ ಮೈದಾ ಹಿಟ್ಟು
1/4 ಟೀಸ್ಪೂನ್ ಅಡಿಗೆ ಸೋಡಾ
ಚಿಟಕಿ ಇಂಗು
ರುಚಿಗೆ ತಕ್ಕಷ್ಟು ಉಪ್ಪು
1 ಕಪ್ ಮಜ್ಜಿಗೆ
2 ಟೀಸ್ಪೂನ್ ನುಣ್ಣಗೆ ಕತ್ತರಿಸಿದ ಕರಿಬೇವಿನ ಸೊಪ್ಪುಗಳು
ಚಿಕ್ಕದಾಗಿ ಕತ್ತರಿಸಿದ 2 ಹಸಿಮೆಣಸಿನಕಾಯಿ
ಸಣ್ಣಗೆ ಕತ್ತರಿಸಿದ 1 ಇಂಚಿನ ಶುಂಠಿ
2 ಟೀಸ್ಪೂನ್ ಸಣ್ಣದಾಗಿ ಕತ್ತರಿಸಿದ ಕೊಬ್ಬರಿ
ಹುರಿಯಲು ಎಣ್ಣೆ
Saakshatv cooking recipes goli baje

ಮಾಡುವ ವಿಧಾನ 

ಒಂದು ಪಾತ್ರೆಯಲ್ಲಿ ಮೈದಾ, ಅಡಿಗೆ ಸೋಡಾ, ಇಂಗು ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
ಈಗ 1 ಕಪ್ ಮಜ್ಜಿಗೆ ಅಥವಾ ಮೊಸರನ್ನು‌ ಅದಕ್ಕೆ ಸೇರಿಸಿ.
ಹಿಟ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ.
ಅದಕ್ಕೆ ಸಣ್ಣದಾಗಿ ಕತ್ತರಿಸಿದ ಕರಿಬೇವು ಸೊಪ್ಪು, ಹಸಿ ಮೆಣಸು, ಶುಂಠಿ ಮತ್ತು ಕೊಬ್ಬರಿ ಸೇರಿಸಿ.
ಎಲ್ಲವನ್ನೂ ಚೆನ್ನಾಗಿ ಕಲಸಿ ಮಿಶ್ರಣ ಮಾಡಿ. ಹಿಟ್ಟನ್ನು 3 ಗಂಟೆಗಳ ಕಾಲ ಮುಚ್ಚಿಡಿ.

3 ಗಂಟೆಗಳ ನಂತರ, ಹಿಟ್ಟನ್ನು ಮತ್ತೆ ಕಲಸಿ, ಸಣ್ಣ ಚೆಂಡಿನ ಗಾತ್ರದ ಉಂಡೆಗಳನ್ನು ಮಾಡಿ.
ಬಾಣಲೆಯಲ್ಲಿ ಎಣ್ಣೆ ಬಿಸಿ‌ ಮಾಡಿ, ಹಿಟ್ಟಿನ ಉಂಡೆಗಳನ್ನು ಎಣ್ಣೆಯಲ್ಲಿ ಬಿಡಿ.‌ ಮಧ್ಯಮ ಜ್ವಾಲೆಯಲ್ಲಿ ಎರಡೂ ಬದಿಗಳನ್ನು ಹುರಿಯಿರಿ. ಗೋಳಿ ಬಜೆ ಹೊಂಬಣ್ಣಕ್ಕೆ ತಿರುಗಿದ ಬಳಿಕ ಮತ್ತು ಗರಿಗರಿಯಾದ ನಂತರ ಅದನ್ನು ತೆಗೆಯಿರಿ.‌
ಈಗ ಗೋಳಿ ಬಜೆ ತೆಂಗಿನಕಾಯಿ ಚಟ್ನಿಯೊಂದಿಗೆ ಸವಿಯಲು ಸಿದ್ಧವಾಗಿದೆ.

3. ಬಟಾಟೆ ಬೋಂಡಾ

ಬೇಕಾಗುವ ಸಾಮಗ್ರಿಗಳು

ಸಾಸಿವೆ – 1/2 ಚಮಚ
ಉದ್ದಿನ ಬೇಳೆ -1/2 ಚಮಚ
ಹಸಿಮೆಣಸಿನಕಾಯಿ – 2
ಶುಂಠಿ ತುರಿ – 1 ಚಮಚ
ಕರಿಬೇವಿನ ಸೊಪ್ಪು – ಸ್ವಲ್ಪ
ಬೇಯಿಸಿದ ಬಟಾಣಿ – 1/2 ಕಪ್
ಬೇಯಿಸಿದ ಬಟಾಟೆ – 2
ರುಚಿಗೆ ತಕ್ಕಷ್ಟು ಉಪ್ಪು
ಕೊತ್ತಂಬರಿ ಸೊಪ್ಪು ಸ್ವಲ್ಪ
ಹುರಿಯಲು ಎಣ್ಣೆ

ಕಡ್ಲೆಹಿಟ್ಟು – 1 ಕಪ್
ಅಕ್ಕಿ ಹಿಟ್ಟು – 1 ಚಮಚ
ಕೆಂಪು ಮೆಣಸಿನ ಪುಡಿ – 1/2 ಚಮಚ
ಅಜ್ವೈನ್ – 1/4 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಬಿಸಿ ಎಣ್ಣೆ – 1 ಚಮಚ
ಅಗತ್ಯವಿರುವಷ್ಟು ನೀರು
Saakshatv cooking recipe

ಮಾಡುವ ವಿಧಾನ

ಮೊದಲಿಗೆ ಬಟಾಟೆಗಳನ್ನು ಬೇಯಿಸಿ ಚೆನ್ನಾಗಿ ಮ್ಯಾಶ್ ಮಾಡಿ.‌ ನಂತರ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಅದಕ್ಕೆ ಸಾಸಿವೆ ಸೇರಿಸಿ. ಸಾಸಿವೆ ಸಿಡಿದ ನಂತರ ಉದ್ದಿನ ಬೇಳೆ, ಹಸಿ ಮೆಣಸಿನಕಾಯಿ, ಶುಂಠಿ, ಕರಿಬೇವಿನ ಸೊಪ್ಪು ಸೇರಿಸಿ ಹುರಿಯಿರಿ. ಬಳಿಕ ಅದಕ್ಕೆ ಬಟಾಣಿ ಮತ್ತು ಮ್ಯಾಶ್ ಮಾಡಿದ ಬಟಾಟೆಗಳನ್ನು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ಈ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕತ್ತರಿಸಿದ ಕೊತ್ತಂಬರಿ ಸೊಪ್ಪುಗಳನ್ನು ಉದುರಿಸಿ. ನಂತರ ಈ ಮಿಶ್ರಣದಿಂದ ಸಣ್ಣ ಸಣ್ಣ ಉಂಡೆಗಳನ್ನು ತಯಾರಿಸಿ ಇಟ್ಟುಕೊಳ್ಳಿ.

ಕಡ್ಲೆಹಿಟ್ಟು, ಅಕ್ಕಿ ಹಿಟ್ಟು, ಕೆಂಪು ಮೆಣಸಿನ ಪುಡಿ, ಅಜ್ವೈನ್, ಉಪ್ಪು, ಬಿಸಿ ಎಣ್ಣೆ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಅಗತ್ಯವಿರುವಷ್ಟು ನೀರು ಸೇರಿಸಿ ಹಿಟ್ಟನ್ನು ತಯಾರಿಸಿ.
ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ತಯಾರಿಸಿ ಇಟ್ಟುಕೊಂಡ ಅಲೂಪಲ್ಯದ ಉಂಡೆಗಳನ್ನು ಕಡ್ಲೆಹಿಟ್ಟಿನಲ್ಲಿ ಮುಳುಗಿಸಿ ಎಣ್ಣೆಯಲ್ಲಿ ಬಿಡಿ. ಹೊಂಬಣ್ಣಕ್ಕೆ ತಿರುಗುವವರೆಗೆ ಕಾಯಿಸಿ ತೆಗೆಯಿರಿ. ಈಗ ರುಚಿಯಾದ ಬಿಸಿ ಬಿಸಿ ಅಲೂ ಬೋಂಡ ಸವಿಯಲು ಸಿದ್ಧವಾಗಿದೆ.

4. ರವಾ ಗೋಳಿ ಬಜೆ

ಬೇಕಾಗುವ ಸಾಮಗ್ರಿಗಳು :

ಚಿರೋಟಿ ರವೆ – 1ಕಪ್
ಸೋಡಾ – 1/4 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಮೊಸರು‌ 1/2 ಕಪ್
ಜೀರಿಗೆ – 1 ಚಮಚ
ಹೆಚ್ಚಿದ ಹಸಿಮೆಣಸಿನಕಾಯಿ – 1
ತುರಿದ ಶುಂಠಿ – 1ಇಂಚು
ಕರಿಬೇವು, ಕೊತ್ತಂಬರಿ ಸೊಪ್ಪು – ಸ್ವಲ್ಪ
ಸಕ್ಕರೆ – 1 ಚಮಚ
Saakshatv cooking recipes goli baje

ಮಾಡುವ ‌ವಿಧಾನ

ಮೊದಲಿಗೆ ಚಿರೋಟಿ ರವೆಯನ್ನು ಮಿಕ್ಸಿಯಲ್ಲಿ ಪುಡಿ ಮಾಡಿಕೊಂಡು ಒಂದು ಅಗಲವಾದ ಪಾತ್ರೆಗೆ ಹಾಕಿ. ನಂತರ ಅದಕ್ಕೆ ಮೊಸರು ಸೇರಿಸಿ ಚೆನ್ನಾಗಿ ಕಲಸಿ. ಬಳಿಕ ಇದನ್ನು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿ. ಈ ಮಿಶ್ರಣಕ್ಕೆ ಜೀರಿಗೆ, ಹಸಿಮೆಣಸಿನಕಾಯಿ, ಶುಂಠಿ, ಕರಿಬೇವು, ಕೊತ್ತಂಬರಿ ಸೊಪ್ಪು, ಸಕ್ಕರೆ ‌ಸೇರಿಸಿ ಚೆನ್ನಾಗಿ ಕಲಸಿ. 2 ಗಂಟೆಗಳ ಕಾಲ ಹಾಗೆಯೇ ಬಿಡಿ. ‌
ನಂತರ ಸೋಡಾ ಸೇರಿಸಿ ಬೆರೆಸಿ. ನಂತರ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. 3 ಗಂಟೆಗಳ ನಂತರ, ಹಿಟ್ಟನ್ನು ಮತ್ತೆ ಕಲಸಿ, ಸಣ್ಣ ಚೆಂಡಿನ ಗಾತ್ರದ ಉಂಡೆಗಳನ್ನು ಮಾಡಿ.
ಬಾಣಲೆಯಲ್ಲಿ ಎಣ್ಣೆ ಬಿಸಿ‌ ಮಾಡಿ, ಹಿಟ್ಟಿನ ಉಂಡೆಗಳನ್ನು ಎಣ್ಣೆಯಲ್ಲಿ ಬಿಡಿ.‌ ಮಧ್ಯಮ ಜ್ವಾಲೆಯಲ್ಲಿ ಎರಡೂ ಬದಿಗಳನ್ನು ಹುರಿಯಿರಿ. ಗೋಳಿ ಬಜೆ ಹೊಂಬಣ್ಣಕ್ಕೆ ತಿರುಗಿದ ಬಳಿಕ ಮತ್ತು ಗರಿಗರಿಯಾದ ನಂತರ ಅದನ್ನು ತೆಗೆಯಿರಿ.

5. ಉದ್ದಿನ ಬೋಂಡಾ

ಬೇಕಾಗುವ ಸಾಮಗ್ರಿಗಳು

ಉದ್ದಿನಬೇಳೆ – 1 ಕಪ್
ಹಸಿಮೆಣಸಿನಕಾಯಿ – 2
ಕರಿಬೇವು – ಸ್ವಲ್ಪ
ಕೊತಂಬರಿ ಸೊಪ್ಪು – ಸ್ವಲ್ಪ
ಚಿಕ್ಕದಾಗಿ ಕತ್ತರಿಸಿದ ಒಣ ತೆಂಗಿನಕಾಯಿ/ಕೊಬ್ಬರಿ 2 ಚಮಚ
ಅಕ್ಕಿ ಹಿಟ್ಟು – 1 ಚಮಚ
ಅಡುಗೆ ಸೋಡಾ – ಚಿಟಕಿಯಷ್ಟು
ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ

ಮೊದಲಿಗೆ ಉದ್ದಿನಬೇಳೆಯನ್ನು ತೊಳೆದು 1-2 ಗಂಟೆಗಳ ಕಾಲ ನೆನೆಸಿಡಿ. ನಂತರ ನೀರನ್ನು ಸೋಸಿ ಉದ್ದಿನಬೇಳೆಯನ್ನು ಮಿಕ್ಸಿ ಜಾರ್ ಅಥವಾ ಗ್ರೈಂಡರ್ಗೆ ಹಾಕಿ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ. ಬಳಿಕ ಇದನ್ನು ಪಾತ್ರೆಗೆ ವರ್ಗಾಯಿಸಿ. ಅದಕ್ಕೆ ಕತ್ತರಿಸಿದ ಹಸಿಮೆಣಸಿನಕಾಯಿ, ಕರಿಬೇವು, ಕೊತಂಬರಿ ಸೊಪ್ಪು, ಒಣ ತೆಂಗಿನಕಾಯಿ/ಕೊಬ್ಬರಿ, ಅಕ್ಕಿ ಹಿಟ್ಟು, ಅಡುಗೆ ಸೋಡಾ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ‌ಮಾಡಿ, ಹಿಟ್ಟನ್ನು ಬೋಂಡಾಗಳಂತೆ ಬಿಡಿ. ಮಂದ ಉರಿಯಲ್ಲಿ ಹೊಂಬಣ್ಣಕ್ಕೆ ತಿರುಗುವವರೆಗೆ ಚೆನ್ನಾಗಿ ಕರಿದು ತೆಗೆಯಿರಿ. ಈಗ ರುಚಿಯಾದ ಉದ್ದಿನ ಬೋಂಡಾ ಸವಿಯಲು ಸಿದ್ಧವಾಗಿದೆ

 

Tags: #saakshatvcookingFood
ShareTweetSendShare
Join us on:

Related Posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

by admin
February 16, 2026
0

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ...

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram