ಬೆಂಗಳೂರು : ಹೆಮ್ಮಾರಿ ಕೊರೊನಾ ಸೋಂಕಿಗೆ ತುತ್ತಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಸಂಸದ ಅಶೋಕ ಗಸ್ತಿ ಅವರು ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ 15 ದಿನಗಳ ಹಿಂದೆ ಅಶೋಕ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಆಗ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ.
ಇನ್ನು ಅಶೋಕ್ ಅವರ ಪತ್ನಿ ಹಾಗೂ ಪುತ್ರಿಯರಿಗೂ ಕೊರೊನಾ ಸೋಂಕಿದ್ದು,ಅವರಿಗೆ ಚಿಕಿತ್ಸೆ ಮುಂದುವರಿದೆ.
ರಾಯಚೂರು ಮೂಲದ ಅಶೋಕ್ ಅವರು ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.
ಎಬಿವಿಪಿಯಿಂದ ಸಾರ್ವಜನಿಕ ಜೀವನ ಆರಂಭಿಸಿದ್ದ ಅಶೋಕ್ ಗಸ್ತಿ, ಆರ್ ಎಸ್ ಎಸ್ ಬಿಜೆಪಿಯಲ್ಲಿ ಕೆಲಸ ಮಾಡಿದ್ದರು.
ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಬಿಜೆಪಿ ಪ್ರಭಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಹಿಂದೆ ಎರಡು ಬಾರಿ ರಾಯಚೂರುನಗರ ಕ್ಷೇತ್ರದ ಟಿಕೆಟ್ಗೆ ಯತ್ನಿಸಿ ವಿಫಲರಾಗಿದ್ದರು.