ಜನತಾ ಕಫ್ರ್ಯೂನಿಂದ ಕೊರೊನಾ ನಿಯಂತ್ರಣ ಅಸಾಧ್ಯ : ಶೋಭಾ ಕರಂದ್ಲಾಜೆ
ಉಡುಪಿ : ಜನತಾ ಲಾಕ್ ಡೌನ್ ನಿಂದ ಕೊರೊನಾ ನಿಯಂತ್ರಣ ಕಷ್ಟ ಅನಿಸುತ್ತಿದ್ದು, ಸಂಪೂರ್ಣ ಲಾಕ್ ಡೌನ್ ನ ಅನಿವಾರ್ಯತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನತಾ ಲಾಕ್ ಡೌನ್ ನಿಂದ ಕೊರೊನಾ ನಿಯಂತ್ರಣ ಕಷ್ಟ ಅನಿಸುತ್ತೆ.
ಕಳೆದ ಬಾರಿಯಂತೆ ಗಂಭೀರವಾಗಿ ಕಪ್ರ್ಯೂ ಮಾಡಬೇಕು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು.
ಉಳಿದಂತೆ ಪೂರ್ಣ ಲಾಕ್ಡೌನ್ ಮಾಡಬೇಕು ಎಂದು ಹೇಳಿದರು.
ಇನ್ನು ಜನ ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ. ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ.
ಜನ ಹೆಚ್ಚು ಬೆರೆಯುವುದರಿಂದ ರೋಗ ಹರಡುತ್ತದೆ. ಮುಂಬೈ ಬೆಂಗಳೂರಿನಿಂದಲೂ ಜನ ಜಿಲ್ಲೆಗೆ ಬರುತ್ತಿದ್ದಾರೆ.
ಹೊರ ಜಿಲ್ಲೆಗಳಿಂದ ಬಂದವರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡಿಸಬೇಕು. ಇವತ್ತಿಂದ ರ್ಯಾಪಿಡ್ ಟೆಸ್ಟ್ ಆರಂಭಿಸಲು ಸೂಚನೆ ನೀಡಿದ್ದೇನೆ.
ಜನರು ಮನೆಯಿಂದ ಹೊರಬಂದರೆ ಚೈನ್ ಲಿಂಕ್ ಕಟ್ ಮಾಡಲು ಅಸಾಧ್ಯ ಎಂದರು.