ಮಗನಿಗೆ ಕೋವಿಡ್ ಬಂದ ಹಿನ್ನೆಲೆ ಮನೆಯನ್ನು ಸೀಲ್ ಡೌನ್ ಮಾಡಲಾಗಿದ್ದ ಪರಿಣಾಮ ಜನರಿಂದ ತೀವ್ರ ನಿಂದನೆಗೆ ಒಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೋಕಿನ ಸೋಮಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ತಂದೆ ತಾಯಿಯನ್ನ ನೋಡಲು ಬಂದಿದ್ದ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಬರುವಂತೆ ಗ್ರಾಮಸ್ಥರು ಒತ್ತಾಯಿಸಿದ್ರು. ಈ ವೇಳೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಮನೆಯನ್ನು ಜಿಲ್ಲಾಡಳಿತದ ವತಿಯಿಂದ ಸೀಲ್ ಡೌನ್ ಮಾಡಲಾಗಿತ್ತು. ಸಾರ್ವಜನಿಕರು ಕುಟುಂಬಸ್ಥರ ನಿಂದನೆ ಮಾಡಿದ್ದಾರೆ. ಅಷ್ಟೇ ಅಲ್ಲ ಬಹಿರ್ದೆಸೆಗೂ ಹೊರಬಾರದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ನಿಮ್ಮ ಮಗನಿಂದ ಊರಿಗೆ ಕೆಟ್ಟ ಹೆಸರು ಬಂದಿದೆ ಎಂದು ನಿಂದಿಸುತ್ತಲೇ ಬಂದ ಗ್ರಾಮಸ್ಥರು ಆಹಾರ ಪದಾರ್ಥಗಳ ಖರೀದಿಗೂ ಹೊರ ಬಾರದಂತೆ ಹಿಂಸೆ ನೀಡಿದ್ದಾರೆ. ಹೀಗಾಗಿ ಅವಮಾನ ತಾಳಲಾರದೇ , ಗ್ರಾಮಸ್ಥರ ನಿಂದನೆಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪುತ್ರ ತಂದೆಯ ಅಂತಿಮ ಸಂಸ್ಕಾರಕ್ಕೆ ತೆರಳಿ ಮತ್ತೆ ಕೋವಿಡ್ ಆಸ್ಪತ್ರೆಗೆ ಮರಳಿದ್ದಾರೆ. ಅಲ್ಲದೇ ಈ ಬಗ್ಗೆ ನೊಂದು ವಿಡಿಯೋ ಮಾಡಿರುವ ಮಗ ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಭಾವುಕರಾಗಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಗ್ರಾಮಸ್ಥರ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
fifa worldcup2026-ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು
ಸಿಆರ್ & ಎಲ್ಎಂ..! ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...








