ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ”
ಬೆಂಗಳೂರು : ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ” ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.
ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳನ್ನ ಮಾಡಿರುವ ರಾಜ್ಯ ಕಾಂಗ್ರೆಸ್, ರಾಜ್ಯ ಸರ್ಕಾರ ಅಘೋಷಿತ ಲಾಕ್ಡೌನ್ ಜಾರಿಗೊಳಿಸಿದೆ. ಬಡವರಿಗೆ, ಸ್ವಉದ್ಯೋಗಿಗಳಿಗೆ, ಕಾರ್ಮಿಕರಿಗೆ ಸೇರಿದಂತೆ ಎಲ್ಲಾ ಅರ್ಹರಿಗೆ ಕೂಡಲೇ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು.
ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಸಣ್ಣ & ಮಧ್ಯಮ ಉದ್ಯಮ, ಕೈಗಾರಿಕೆಗಳ ನೆರವಿಗೆ ಅಗತ್ಯ ಕ್ರಮ ಕೈಗೊಂಡು ಉದ್ಯೋಗ ಹಾಗೂ ಆರ್ಥಿಕ ನಷ್ಟವಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದೆ.
ಕೊರೊನಾ ನಿಗ್ರಹಿಸುವಿಕೆಯ ಭಾಗವಾದ ಟ್ರೀಟಿಂಗ್ನಲ್ಲಿ ಅಧೋಗತಿಗೆ ಇಳಿದಿದ್ದು ನಿತ್ಯ ಕಾಣುತ್ತಿದೆ. ಟ್ರಾಕಿಂಗ್ನಲ್ಲಿಯೂ ಸರ್ಕಾರ ವಿಫಲವಾಗಿದೆ. ಸಿಎಂ ಬಿಎಸ್ ಯಡೊಯೂರಪ್ಪ ಸೇರಿದಂತೆ, ಮಂತ್ರಿಗಳು, ಶಾಸಕರಿಗೆ ಸೋಂಕು ತಗುಲಿತ್ತು, ಅವರ ಸಂಪರ್ಕಕ್ಕೆ ಬಂದವರಿಗೆ ಯಾವುದೇ ಕಟ್ಟುನಿಟ್ಟಿನ ಐಸೋಲೇಶನ್ ನಿಯಮ ಪಾಲಿಸಲಿಲ್ಲ. ಇದೇ ಸೋಂಕಿತಸರ್ಕಾರ ದ ವೈಫಲ್ಯಕ್ಕೆ ಸಾಕ್ಷಿ.
ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ. ಕೊರೊನಾ ಬಂದು ಒಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೋಪಿಸದೆ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ ಈ ಸೋಂಕಿತಸರ್ಕಾರ ದ ನಿರ್ಲಕ್ಷ್ಯ, ಬೇಜವಾಬ್ದಾರಿತನ, ಭ್ರಷ್ಟಾಚಾರಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ದೂರಿದೆ.