ಚಿಕ್ಕಮಗಳೂರಿನಲ್ಲಿ ಮತ್ತೆ ಕೊರೊನಾ ಸ್ಫೋಟ | ಶಾಲೆಗಳಿಗೆ ಕಠಿಣ ನಿಯಮಾವಳಿ Corona saaksha tv
ಚಿಕ್ಕಮಗಳೂರು : ಜಿಲ್ಲೆಯ ಶಾಲಾ – ಕಾಲೇಜುಗಳಲ್ಲಿ ಕಠಿಣ ಕೋವಿಡ್ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆ. ಆದರೂ ಮಲೆನಾಡು ಭಾಗದ ಶಾಲಾ ಕಾಲೇಜುಗಳಲ್ಲಿ ಕೊರೊನಾ ಸ್ಫೋಟವಾಗುತ್ತಲೇ ಇದೆ.
ನರಸಿಂಹರಾಜಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಓರ್ವ ಶಿಕ್ಷಕ ಸೇರಿ 10 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಹಿನ್ನೆಲೆ ಶಾಲೆಯನ್ನು ಒಂದು ವಾರಗಳ ಕಾಲ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಕೆ. ಎಂ. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.
ಸದ್ಯ ಕೊರೊನಾ ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಮನೆಯಲ್ಲೇ ಐಸೋಲೇಷನ್ ಮಾಡಲಾಗಿದೆ.









