ಗಂಡಿಬಾಗಿಲು ಸಿಯೋನ್ ಅನಾಥಾಶ್ರಮದಲ್ಲಿ ಕೊರೊನಾ ಸ್ಫೋಟ corona
ದಕ್ಷಿಣ ಕನ್ನಡ : ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೋನ್ ಅನಾಥಾಶ್ರಮದಲ್ಲಿ ಕೊರೊನಾ ಸ್ಫೋಟವಾಗಿದೆ.
ಬರೋಬ್ಬರಿ 200ಕ್ಕೂ ಹೆಚ್ಚು ಮಂದಿ ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಧರ್ಮಸ್ಥಳದ ರಜತಾದ್ರಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ.
ಸ್ಥಳೀಯ ಆಡಳಿತದ ಮಾಹಿತಿ ಪ್ರಕಾರ ಸಿಯೋನ್ ಅನಾಥಾಶ್ರಮದಲ್ಲಿ 210 ಜನಕ್ಕೆ ಕೋವಿಡ್ ವಕ್ಕರಿಸಿದೆ.
ಆಶ್ರಮದಲ್ಲಿ ಒಟ್ಟು 270 ಮಂದಿಯಿದ್ದು, ಈ ಪೈಕಿ ಎಲ್ಲರ ಪರೀಕ್ಷೆ ನಡೆಸಲಾಗಿತ್ತು. ಇವರಲ್ಲಿ 210 ಮಂದಿಗೆ ಕೊರೊನಾ ಕಾಣಿಸಿಕೊಂಡಿದೆ.
ಈ ಹಿನ್ನೆಲೆ ಶಾಸಕ ಹರೀಶ್ ಪೂಂಜ ಅವರು ಆಶ್ರಮಕ್ಕೆ ಭೇಟಿ ನೀಡಿ, ಕೋವಿಡ್ ಪಾಸಿಟಿವ್ ಲಕ್ಷಣ ಇರುವವರನ್ನು ಧರ್ಮಸ್ಥಳದ ರಜತಾದ್ರಿ ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳಾಂತರಿಲು ಸೂಚಿಸಿದ್ದಾರೆ.