ಚೆಂಬೆಳಕಿನ ಕವಿ ನಾಡೋಜ ಚನ್ನವೀರ ಕಣವಿ ಅವರಿಗೆ ಕೊರೊನಾ
ಧಾರವಾಡ : ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ ನಾಡೋಜ ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
93 ವರ್ಷದ ಕಣವಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ತಪಾಸಣೆಗೆಂದು ಖಾಸಗಿ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ.
ಸದ್ಯ ಚನ್ನವೀರ ಕಣವಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತ ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ನಿನ್ನೆ 399 ಮಂದಿಗೆ ಸೋಂಕು ದೃಢಪಟ್ಟಿದ್ದು, ಸದ್ಯ 1,097 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.