ಕೊರೊನಾ ಹೆಚ್ಚಳ | ಮಂಡ್ಯದಲ್ಲಿ ಲಸಿಕೆ ಬಗ್ಗೆ ಜಾಗೃತಿ ಅಭಿಯಾನ
ಮಂಡ್ಯ : ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಬೆನ್ನಲ್ಲೆ ಕೋವಿಡ್ ನಿಯಮ ಪಾಲನೆ ಹಾಗೂ ಲಸಿಕೆ ಬಗ್ಗೆ ಜಿಲ್ಲಾಡಳಿತ ಜಾಗೃತಿ ಅಭಿಯಾನ ಆರಂಭಿಸಿದೆ.
ಜಾನಪದ ಹಾಗೂ ಬೀದಿ ನಾಟಕದ ಮೂಲಕ ಜನರಲ್ಲಿ ಅರಿವು ಮೂಡಿಸುವ ಕೆಲಸಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಮಂಡ್ಯ KSRTC ಬಸ್ ನಿಲ್ದಾಣದಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಇದೇ ಸಂದರ್ಭದಲ್ಲಿ KSRTC ಬಸ್ ನಿಲ್ದಾಣದಲ್ಲಿ ಡಿಹೆಚ್ ಒ ಮಾಸ್ಕ್ ವಿತರಿಸಿದರು.
ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ.
ಕಡ್ಡಾಯವಾಗಿ ಕೊರೊನಾ ನಿಯಮ ಪಾಲನೆ ಮಾಡಿ. ಕಳೆದ ಎರಡೂ ಅಲೆಯಲ್ಲಿ ಸಾಕಷ್ಟು ನೋವು ಅನುಭವಿಸಿದ್ದೇವೆ.
ಕೊರೊನಾ ಹೆಚ್ಚಳದಿಂದ ಮತ್ತೆ ಲಾಕ್ ಡೌನ್ ಆಗುತ್ತದೆ ಎಂದು ಎಚ್ಚರಿಸಿದರು.
ಇನ್ನು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದು, ಕೊರೊನಾ ನಿಯಮ ಪಾಲನೆ ಮಾಡಿ.
ಇಲ್ಲದಿದ್ದರೆ ಈ ಬಾರಿಯು ಲಾಕ್ ಡೌನ್ ನಿಂದ ಮತ್ತೆ ಸಂಕಷ್ಟಕ್ಕೆ ಸಿಲುಕುತ್ತೇವೆ ಎಂದು ಸಾರ್ವಜನಿಕರಿಗೆ ಜಾಗೃತಿ ಜೊತೆಗೆ ಲಾಕ್ ಡೌನ್ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.