ಮಂಡ್ಯದಲ್ಲಿ ಕೊರೊನಾ ಹೆಚ್ಚಳ | ಸಂಕ್ರಾಂತಿ ಹಬ್ಬಕ್ಕೆ ಬ್ರೇಕ್
ಮಂಡ್ಯ : ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಸಂಕ್ರಾತಿ ಹಬ್ಬ ಹಾಗೂ ವೈಕುಂಠ ಏಕಾದಶಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ.
ಕೊರೊನಾ ಕಾರಣದಿಂದಾಗಿ ಸಂಕ್ರಾತಿ ಹಬ್ಬದಂದು ದನ ಕಿಚ್ಚಾಯಿಸುವುದಕ್ಕೆ ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವಥಿ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಇದಲ್ಲದೇ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಗೂಡುವುದಕ್ಕೆ ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗಿದೆ. ಈ ಬಾರಿ ಸಂಕ್ರಾಂತಿ ಹಬ್ಬ ಮನೆಗೆ ಸೀಮಿತವಾಗಿರಲಿದೆ.
ಇನ್ನು ಜಿಲ್ಲಾಡಳಿತದ ಈ ಆದೇಶವನ್ನು ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.
ಇತ್ತ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಓಂ ಶಕ್ತಿ ಯಾತ್ರೆ ಮುಗಿಸಿಕೊಂಡು ವಾಪಸ್ ಆದವರಲ್ಲಿಯೇ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ.