ಕಲಬುರಗಿ | ಬೆಡ್, ವೆಂಟಿಲೇಟರ್ ಸಿಗದೆ ಕೊರೊನಾ ಸೋಂಕಿತ ಸಾವು
ಕಲಬುರಗಿ : ಬೆಡ್, ವೆಂಟಿಲೇಟರ್ ಸಿಗದೇ ಕೊರೊನಾ ಸೋಂಕಿತನೋರ್ವ ಕಾರಿನಲ್ಲಿ ಪ್ರಾಣ ಬಿಟ್ಟ ದಾರುಣ ಘಟನೆ ಕಲಬುಗಿಯ ಸತ್ಯ ಆಸ್ಪತ್ರೆ ಬಳ ನಡೆದಿದೆ.
ರಾಜ್ಯದಲ್ಲಿ ಕೊರೊನಾ ಬ್ರೇಕ್ ಫೇಲ್ಯೂರ್ ಆಗಿದ್ದು, ಪ್ರತಿದಿನ ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದೆ.
ಅದರಂತೆ ಕಲಬುರಗಿಯಲ್ಲೂ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಈ ಹಿನ್ನೆಲೆ ಆಸ್ಪತ್ರೆಗಳು ಭರ್ತಿಯಾಗುತ್ತಿದ್ದು, ಆಕ್ಸಿಜನ್, ಬೆಡ್ ಗಾಗಿ ರೋಗಿಗಳ ಪರದಾಡುತ್ತಿದ್ದಾರೆ.
ವೆಂಟಿಲೇಟರ್ ಮತ್ತು ಬೆಡ್ ಸಿಗದೆ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿದ್ದಾರೆ.
ಅದರ ಮುಂದುವರೆದ ಭಾಗವಾಗಿ ಇಂದು ನಾಲ್ಕು ಗಂಟೆಯಿಂದ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಲೆದರೂ ಸಹ ಸರಿಯಾದ ಸಮಯಕ್ಕೆ ಬೆಡ್ ಹಾಗೂ ವೆಂಟಿಲೇಟರ್ ಸಿಗದೆ ಕೊರೊನಾ ಸೋಂಕಿತನೋರ್ವ ಕಾರಿನಲ್ಲೇ ಪ್ರಾಣ ಬಿಟ್ಟದ್ದಾರೆ.
ಮೃತರನ್ನು ಕಾಳಗಿ ಪಟ್ಟಣದ ಶಂಕರ ಎಂದು ಗುರುತಿಸಲಾಗಿದೆ.ಶಂಕರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.