ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಮ್ಮಾರಿ ಕೊರೊನಾ ಅಬ್ಬರಕ್ಕೆ ಜನತೆ ತತ್ತರಿಸಿ ಹೋಗಿದ್ದಾರೆ. ಮಂಡ್ಯದ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಮಂಡ್ಯದ ವಿದ್ಯಾನಗರದಲ್ಲಿರುವ ನಸಿರ್ಂಗ್ ಹೋಂನ್ನು ಸೀಲ್ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತ ವ್ಯೆದ್ಯರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಂಡ್ಯದಲ್ಲಿ ಮಕ್ಕಳ ತಜ್ಞರಾಗಿರುವ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಬಳಿ ಚಿಕಿತ್ಸೆ ಪಡೆದ ಮಕ್ಕಳು ಸೇರಿದಂತೆ ಜನರಲ್ಲಿ ಆತಂಕ ಶುರುವಾಗಿದೆ. ವೈದ್ಯನ ಸಂಪರ್ಕಕ್ಕೆ ಬಂದವರ ಮಾಹಿತಿಯನ್ನು ಆರೋಗ್ಯಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ವೈದ್ಯರ ಬಳಿ ಚಿಕಿತ್ಸೆ ಪಡೆದವರು ಸ್ವಯಂ ಪ್ರೇರಿತರಾಗಿ ಬಂದು ಕೋವಿಡ್ ಟೆಸ್ಟ್ಗೆ ಒಳಗಾಗುವಂತೆ ಮಂಡ್ಯ ಜಿಲ್ಲಾಡಳಿತ ಮನವಿ ಮಾಡಿದೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








