ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್.ಆರ್ ನಗರ, ಶಿರಾದಲ್ಲಿ ಕೊರೊನಾ ಸೋಂಕಿತರಿಂದ ಮತದಾನ..!

Kariyappa N by Kariyappa N
November 3, 2020
in Newsbeat, Politics, Samagra karnataka, ರಾಜ್ಯ
corona infected
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರ ಹಾಗೂ ತುಮಕೂರಿನ ಶಿರಾ ಕ್ಷೇತ್ರದ ಉಪಚುನಾವಣೆ ಸಣ್ಣಪುಟ್ಟ ಗೊಂದಲವನ್ನು ಹೊರತುಪಡಿಸಿದರೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಕೊರೊನಾ ಹಿನ್ನೆಲೆಯಲ್ಲಿ ಬೆಳಿಗ್ಗೆ ನೀರಸವಾಗಿದ್ದರೂ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿತ್ತು. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಹಾಗೂ ಹ್ಯಾಂಡ್ ಗ್ಲೌಸ್ ಬಳಕೆಯಂತಹ ಮುಂಜಾಗ್ರತಾ ಕ್ರಮಗಳೊಂದಿಗೆ ನೂಕುನುಗ್ಗಲು, ಜನಸಂದಣಿ ಇಲ್ಲದೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ಈ ನಡುವೆ, ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿತರು ಮತದಾನ ಮಾಡಿದ್ದಾರೆ. ಈ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಜವಾಬ್ದಾರಿ ಮೆರೆದು ಮಾದರಿಯಾಗಿದ್ದಾರೆ.


ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಲಗ್ಗೆರೆ 199ಂ ಮತಗಟ್ಟೆಯಲ್ಲಿ ಕೊರೊನಾ ಸೋಂಕಿತರೊಬ್ಬರು ಮತದಾನ ಮಾಡಿದರು. ಪಿಪಿಇ ಕಿಟ್ ಧರಿಸಿ ಆಂಬ್ಯುಲೆನ್ಸ್ ನಲ್ಲಿ ಬಂದ ಸೋಂಕಿತರ ವ್ಯಕ್ತಿ ತಮಗೆ ಮತದಾನ ಮಾಡಲು ಅವಕಾಶ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

kovid +ve voting
ಕೊರೊನಾ ಸೋಂಕಿತ ವ್ಯಕ್ತಿ ಮತದಾನ ಮಾಡುವುದಕ್ಕೆ ಚುನಾವಣಾ ಸಿಬ್ಬಂದಿ ಮೊದಲು ವಿರೋಧ ವ್ಯಕ್ತಪಡಿಸಿದರು. ತಾವು ಪಿಪಿಇ ಕಿಟ್ ಧರಿಸುವುದಿಲ್ಲ ಎಂದು ಹಠ ಹಿಡಿದಿದ್ದರು. ಆದರೆ, ಆರೋಗ್ಯ ಸಿಬ್ಬಂದಿ ಮನವೊಲಿಕೆ ನಂತರ ಪಿಪಿಇ ಕಿಟ್ ಧರಿಸಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. ಕೊರೊನಾ ಸೋಂಕಿತ ವ್ಯಕ್ತಿ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಇಡೀ ಮತಗಟ್ಟೆಯ ಆವರಣವನ್ನು ಬಿಬಿಎಂಪಿ ಸಿಬ್ಬಂದಿ ರಾಸಾಯನಿಕ ಸಿಂಪರಣೆ ಮಾಡಿ ಸ್ಯಾನಿಟೈಸ್ ಮಾಡಿದರು. ಇದರೊಂದಿಗೆ ಮತಗಟ್ಟೆಯಲ್ಲಿ ಎದುರಾಗಿದ್ದ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದೆ.

kovid infected
ಮತ್ತೊಂದೆಡೆ, ಬಿಇಟಿ ಕಾನ್ವೆಂಟ್ ಮತದಾನ ಕೇಂದ್ರದಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಮತದಾನ ಮಾಡಿದರು.  ಖುದ್ದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಸಮ್ಮುಖದಲ್ಲಿ ಕೊರೋನಾ ಸೋಂಕಿತ ವ್ಯಕ್ತಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಎಲ್ಲಾ ಪರಿಶೀಲನೆ ನಡೆಸಿದ ಬಳಿಕ ಸೋಂಕಿತರಿಂದ ವೋಟ್
ನಾವು ಕೋವಿಡ್ ಸೋಂಕಿತ ಮತದಾನ ಮಾಡಿಸಲು ಎಲ್ಲಾ ಸಿದ್ದತೆ ನಡೆಸಿದ್ದೆವು. ಕೆಲವರು ಮತದಾನ ಮಾಡಲು ಬರಲು ಒಪ್ಪಿರಲಿಲ್ಲ. ಪಿಪಿಇ ಕಿಟ್ ಹಾಕೊಂಡು ಬರೋಲ್ಲ ಅಂತಿದ್ರು. ಇಂದು ಮತದಾನ ಮಾಡಿದ ವ್ಯಕ್ತಿ ಕೊರೊನಾ ಬಂದ ಮೇಲೆ ಕ್ವಾರಂಟೈನ್ ಆಗಿದ್ರು. ಮನೆಯಲ್ಲೇ ಕ್ವಾರಂಟೈನ್ ಆಗಿದ್ರು. ಹಾಗಾಗಿ ಅವರ ವೋಟರ್ ಐಡಿ ಎಲ್ಲಾ ಪರಿಶೀಲನೆ ನಡೆಸಿ ಕರೆಸಿ ಮತದಾನ ಮಾಡಿಸಿದ್ದೇವೆ ಎಂದು ಆರ್.ಆರ್.ನಗರ ಬಿಬಿಎಂಪಿ ಹಿರಿಯ ಆರೋಗ್ಯಾಧಿಕಾರಿ ದಿವ್ಯಾ ಹೇಳಿದ್ದಾರೆ.
ಚುನಾವಣಾ ಸಿಬ್ಬಂದಿಗೆ ಬೆಳಿಗ್ಗೆಯೇ ಹೇಳಿದ್ರೆ ಗಾಬರಿಯಾಗ್ತಾರೆ ಅಂತ ಹೇಳಿರಲಿಲ್ಲ. ಸಂಜೆ 5 ರಿಂದ 6 ಗಂಟೆ ಸೋಂಕಿತ ವ್ಯಕ್ತಿಗಾಗಿ ಸಮಯ ನಿಗಧಿಪಡಿಸಿದ್ದೆವು. ಅವರು ಬಂದು ಖುಷಿಯಿಂದಲೇ ಮತದಾನ ಮಾಡಿದ್ದಾರೆ. ಕೆಲವು ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದ್ರು. ಆದರೆ ನಾವು ಎಲ್ಲರನ್ನು ಮನವರಿಕೆ ಮಾಡಿ ವೋಟ್ ಮಾಡಿಸಿದ್ದೇವೆ. ಸೋಂಕಿತ ವ್ಯಕ್ತಿ ಬರುವ ಮೊದಲು, ನಂತರ ಬೂತ್ ನಲ್ಲಿ ಸ್ಯಾನಿಟೈಸರ್ ಮಾಡಲಾಗಿತ್ತು ಎಂದು ವಿವರಿಸಿದರು.

ಶಿರಾದಲ್ಲಿ ಕೊರೊನಾ ಸೋಂಕಿತ ಮಹಿಳೆ ಮತದಾನ
ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಮತದಾನದ ವೇಳೆ ಕೊರೊನಾ ಸೋಂಕಿತ ಮಹಿಳೆ ಮತದಾನ ಮಾಡಿದರು. 71 ಮಂದಿ ಕೊರೊನಾ ಸೋಂಕಿತರಿಗೆ ಮತದಾನ ಮಾಡಲು ಚುನಾವಣಾ ಅಧಿಕಾರಿಗಳು ಅವಕಾಶ ನೀಡಿದ್ದರು. ಕೋವಿಡ್ ಸೋಂಕಿತರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಮತದಾನಕ್ಕೆ ಎಲ್ಲಾ ವ್ಯವಸ್ಥೆ ಮಾಡಿಕೊಡಲಾಗಿತ್ತು.

kovid +ve infected

ಇವರ ಪೈಕಿ ಶಿರಾ ನಗರದ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸ್ಥಾಪಿಸಿದ್ದ ಮತಗಟ್ಟೆ ಸಂಖ್ಯೆ 177ರಲ್ಲಿ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಮತದಾನ ಮಾಡಿದರು. ಈ ವೇಳೆ ಚುನಾವಣಾ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electioncorona infected votingpeacefull votingRR NagarSira
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram