ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಕರೋನಾ, ಭಯ ಪಡುವ ಅಗತ್ಯವಿಲ್ಲ – ಕ್ರೇಜಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸಂಖ್ಯೆ ಜಾಸ್ತಿಯಾಗುತ್ತಿದೆ. ಈ ಕುರಿತು ದೆಹಲಿ ಸಿ ಎಂ ಅರವಿಂದ ಕ್ರೇಜಿವಾಲ್ ಮಾತನಾಡಿದ್ದಾರೆ.
ಜನರು ಕೊರೊನಾ ಗೆ ಭಯಪಡುವ ಅಗತ್ಯವಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪ್ರತಿದಿನ ಸುಮಾರು 2,500 ರಿಂದ 3,000 ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಕರೋನಾದಿಂದ ಅನಾರೋಗ್ಯಕ್ಕೆ ಒಳಗಾದವರಲ್ಲಿ, ಹೆಚ್ಚಿನ ಜನರು ಆಸ್ಪತ್ರೆಗೆ ಹೋಗುವ ಅಗತ್ಯವಿಲ್ಲ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗುತ್ತಿದೆ.
ರಾಜಧಾನಿಯಲ್ಲಿ 99.78% ಆಮ್ಲಜನಕ ಹಾಸಿಗೆಗಳು ಇನ್ನೂ ಖಾಲಿಯಾಗಿವೆ ಎಂದು ಕೇಜ್ರಿವಾಲ್ ಹೇಳಿದರು. ಸರ್ಕಾರವು 37,000 ಆಮ್ಲಜನಕ ಹಾಸಿಗೆಗಳನ್ನು ವ್ಯವಸ್ಥೆಗೊಳಿಸಿದ್ದು, ಈ ಪೈಕಿ 82 ಹಾಸಿಗೆಗಳಲ್ಲಿ ಮಾತ್ರ ರೋಗಿಗಳಿದ್ದಾರೆ. ದೆಹಲಿಯಲ್ಲಿ ಪ್ರಸ್ತುತ 6,360 ಸಕ್ರಿಯ ಕರೋನಾ ಪ್ರಕರಣಗಳು ದಾಖಲಾಗಿವೆ.
ಒಮಿಕ್ರಾನ್ ಪ್ರಕರಣಗಳಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ.