ಬಾವಲಿಗಳಿಂದ ಕೋವಿಡ್-19 ವೈರಸ್ ಹರಡುತ್ತಿದೆ ಎಂಬ ತಪ್ಪು ಮಾಹಿತಿ ವೈರಲ್ ಆಗುತ್ತಿದ್ದಂತೆ ಕೂಡಲೇ ಅನೇಕರು ತಮ್ಮ ಮನೆ ಮಂದೆ ಇರುವ ಗಿಡ, ಮರಗಳ ಕೊಂಬೆಗಳನ್ನು ಕಡಿಯತ್ತಿರುವ ಕೆಲಸ ನಡೆಯುತ್ತಿದೆ. ಆದರೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ (ಐಸಿಎಂಆರ್) ಮತ್ತು ತಜ್ಞರು ಬಾವಲಿಗಳಿಂದ ಕೋವಿಡ್-19 ಹರಡಲು ಸಾದ್ಯವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ಕೇರಳ, ಹಿಮಾಚಲ ಪ್ರದೇಶ, ಪುದುಚೇರಿ ಮತ್ತು ತಮಿಳುನಾಡು ಪ್ರದೇಶ ವ್ಯಾಪ್ತಿಯ 25ಕ್ಕೂ ಹೆಚ್ಚು ಬಾವಲಿಗಳನ್ನು ಪರೀಕ್ಷೆಗೊಳಪಡಿಸಿ ಅಧ್ಯಯನ ಕೈಗೊಳ್ಳಲಾಗಿತ್ತು. ಭಾರತದ ಎರಡು ಜಾತಿಯ ಬಾವಲಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಆದರೆ, ಈಗ ಮಾನವ ಕುಲಕ್ಕೆ ಕಂಟಕ ತಂದಿರುವ ಕೊರೊನಾ ವೈರಸ್(ಕೋವಿಡ್-19) ಮತ್ತು ಬಾವಲಿಗಳಲ್ಲಿ ಪತ್ತೆಯಾಗಿರುವ ವೈರಸ್ಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.
”ಬಾವಲಿಗಳಿಂದ ಕೊರೊನಾ ವೈರಸ್ ಹರಡುವ ಘಟನೆ ಸಾವಿರ ವರ್ಷಗಳಲ್ಲಿ ಒಮ್ಮೆ ಮಾತ್ರ ಸಂಭವಿಸಬಹುದು, ಎಂದು ಐಸಿಎಂಆರ್ನ ಮುಖ್ಯ ವಿಜ್ಞಾನಿ ಡಾ. ರಮಣ್ ಗಂಗಖೇಡ್ಕರ ಅವರು ಹೇಳಿದ್ದಾರೆ. ಇದುವರೆಗೂ ಭಾರತದಲ್ಲಿನ ಬಾವಲಿಗಳು ಸೋಂಕು ಹರಡುವುದಕ್ಕೆ ಯಾವುದೇ ಸಾಕ್ಷಿ ಲಭ್ಯವಾಗಿಲ್ಲ. ಜನರಲ್ಲಿ ಬಾವಲಿಗಳ ಬಗ್ಗೆ ತಪ್ಪು ಕಲ್ಪನೆ ಹೆಚ್ಚಾದಲ್ಲಿ, ಬಾವಲಿಗಳ ಮಾರಣ ಹೋಮ ನಡೆಯಬಹುದು ಎಂಬ ಆತಂಕವನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








