ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಷ್ಟ್ರಪತಿಗಳಿಗೂ ಕಾಡಿದ ಕೊರೊನಾ ಭೀತಿ

admin by admin
March 22, 2020
in International, Politics
Share on FacebookShare on TwitterShare on WhatsappShare on Telegram

ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಗೆ ತಗುಲಿರುವ ಕೊರೊನಾ ಸೋಂಕು ಸಂಸದ ದುಶ್ಯಂತ್ ಸಿಂಗ್ ಮತ್ತು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನೂ ಕಾಡಿದೆ. ರಾಷ್ಟ್ರಪತಿಗಳ ಎಲ್ಲ ದೈನಂದಿನ ನಿಗದಿತ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು, ಅವರು ಕೋವಿಡ್‌-19 ಪರೀಕ್ಷೆಗೆ ಒಳಗಾಗುತ್ತಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ ಎನ್ನಲಾಗಿದೆ.

ಕೊರೋನಾ ಸೋಂಕು ದೃಢಪಟ್ಟಿರುವ ಬಾಲಿವುಡ್ ಗಾಯಕಿ ಆಯೋಜಿಸಿದ್ದ ಪಾರ್ಟಿಯಲ್ಲಿ ಬಿಜೆಪಿ ಸಂಸದ ದುಶ್ಯಂತ್‌ ಸಿಂಗ್‌ ಭಾಗಿಯಾಗಿದ್ದರು. ನಂತರ ದುಶ್ಯಂತ್‌ ಸಿಂಗ್‌ ಸಂಸತ್ ಗೂ ತೆರಳಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು ಮತ್ತು ರಾಷ್ಟ್ರಪತಿ ಭವನದಲ್ಲಿ ಉತ್ತರ ಪ್ರದೇಶ ಹಾಗು ರಾಜಸ್ಥಾನ ಸಂಸದರಿಗೆ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಕೂಡ ಭಾಗವಹಿಸಿದ್ದರು. ಉಪಹಾರ ಕೂಟದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕೂಡ ಭಾಗವಹಿಸಿದ್ದು, ರಾಷ್ಟ್ರಪತಿಗಳಿಗೆ ಕೊರೊನಾ ಆತಂಕ ಕಾಡಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್‌-19 ಪರೀಕ್ಷೆಗೆ ಒಳಪಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಅಲ್ಲದೆ ಸಂಸತ್ತು ಹಾಗೂ ರಾಷ್ಟ್ರಪತಿ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ದುಶ್ಯಂತ್ ರೊಂದಿಗೆ ಸಂಪರ್ಕ ಹೊಂದಿದ ಸಂಸದರೆಲ್ಲರೂ ಭೀತಿಗೊಳಗಾಗಿದ್ದಾರೆ.
ಮಾರ್ಚ್‌ 18ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಉಪಹಾರ ಕೂಟದಲ್ಲಿ ಭಾಗವಹಿಸಿದ್ದ ದುಶ್ಯಂತ್‌ ಸಿಂಗ್‌, ಶುಕ್ರವಾರ ಸ್ವಯಂ ನಿರ್ಬಂಧ ವಿಧಿಸಿಕೊಂಡು ಮನೆಯಲ್ಲೇ ನಿಗಾದಲ್ಲಿ ಇರುವುದಾಗಿ ಘೋಷಿಸಿದ್ದಾರೆ. ಸಂಸದ ದುಶ್ಯಂತ್‌ ಸಿಂಗ್‌ ಜೊತೆ ಅವರ ತಾಯಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಕೂಡ ಕನಿಕಾ ಕಪೂರ್‌ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದು, ಅವರನ್ನು ಕೂಡ ಹೋಮ್‌ ಐಸೊಲೇಷನ್‌ ನಲ್ಲಿ ಇಡಲಾಗಿದೆ.
ದುಷ್ಯಂತ್‌ ಸಿಂಗ್‌ ಸ್ವಯಂ ನಿರ್ಬಂಧ ವಿಧಿಸಿ ಕೊಂಡಿರುವುದು ಗೊತ್ತಾದ ತಕ್ಷಣ ಟಿಎಂಸಿಯ ಡೆರೆಕ್‌ ಒಬ್ರೆಯನ್‌, ಅಪ್ನಾ ದಳದ ಅನು ಪ್ರಿಯಾ ಪಟೇಲ್‌ ಸೇರಿ ಹಲವರು ಮನೆಯಲ್ಲೇ ಉಳಿದು ಸ್ವಯಂ ನಿರ್ಬಂಧ ವಿಧಿಸಿ ಕೊಂಡಿದ್ದಾರೆ. ಕನಿಕಾ ಕಪೂರ್‌ ಪಾರ್ಟಿಯಲ್ಲಿ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಸಿಂಗ್‌, ಬಿಜೆಪಿಯ ವರುಣ್ ಗಾಂಧಿ, ಬಿಜೆಪಿ ನಾಯಕ ಸುಖೇಂದು ಶೇಖರ್ ರಾಯ್ ಸೇರಿದಂತೆ ಅನೇಕರು ಇದ್ದರು ಎಂಬುದು ತಿಳಿದು ಬಂದಿದ್ದು, ಅವರೆಲ್ಲಾ ತಮ್ಮ ಮನೆಗಳಲ್ಲೇ ನಿಗಾದಲ್ಲಿ ಇರಲು ನಿರ್ಧರಿಸಿದ್ದಾರೆ. ಟಿಎಂಸಿಯ ಡೆರೆಕ್‌ ಒಬ್ರೆಯನ್‌ ‘ಕೇಂದ್ರ ಸರ್ಕಾರ ನಮ್ಮೆಲ್ಲರನ್ನೂ ರಿಸ್ಕ್ ಗೆ ಗುರಿಯಾಗಿಸಿದೆ. ಎಲ್ಲರೂ ಮನೆಗಳಲ್ಲಿ ಇರಿ ಎಂದು ಪ್ರಧಾನಿ ಮೋದಿ ಹೇಳಿದ್ದರೂ, ಸಂಸತ್ ಅಧಿವೇಶನ ಮಾತ್ರ ಮುಂದುವರಿದಿದೆ’ ಎಂದು ಕಿಡಿಕಾರಿದ್ದಾರೆ.
ಮಾರ್ಚ್‌ 18 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಉಪಹಾರ ಕೂಟದಲ್ಲಿ 20 ಸಂಸದರು ಪಾಲ್ಗೊಂಡಿದ್ದು, ಎಲ್ಲ ಸಂಸದರನ್ನು ಥರ್ಮಲ್‌ ಚೆಕ್‌ ಅಪ್‌ ಮಾಡಿಯೇ ರಾಷ್ಟ್ರಪತಿ ಭವನದ ಒಳಗಡೆ ಬಿಡಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಕೂಡ ಶುಕ್ರವಾರ ಆಮೆರಿಕಾದಿಂದ ಭಾರತಕ್ಕೆ ಮರಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ

Related posts

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

July 1, 2026
ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

July 1, 2026
Tags: #BJPFightCoronaSeriously#BoycottCoronomics#CoronaUpdatesInIndia#Covid_19india#COVIDIOT#IndiaFightCorona#italystaystrong#No_quarantine_in_MANUU#StayHomeSaveLivesdushyant singhkanika kapoorRam Nath Kovindrashtrapathi bhavan
ShareTweetSendShare
Join us on:

Related Posts

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

by Shwetha
July 1, 2026
0

ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿರುವ ವೈರಲ್ ಆಡಿಯೋ ವಿವಾದದ ಕುರಿತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

by Shwetha
June 30, 2026
0

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ತೀಕ್ಷ್ಣ ರಾಜಕೀಯ ಹೇಳಿಕೆ ನೀಡಿದ್ದಾರೆ. ಡಿಎಂಕೆ ಪಕ್ಷದ ಕಾರ್ಯಕರ್ತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram