ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸ್ಫೋಟವಾಗಿದ್ದು, ಇಂದು ಬರೋಬ್ಬರಿ 229 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಕಿಲ್ಲರ್ ಕೊರೊನಾಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಮಹಾಮಾರಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಒಟ್ಟು 244ಕ್ಕೇರಿದೆ. ಇಂದು ಮಂಗಳೂರು ತಾಲೂಕಿನ133 ಮಂದಿಗೆ ಕೊರೋನಾ ಪಾಸಿಟಿವ್, ಬಂಟ್ವಾಳ 45, ಪುತ್ತೂರು 22, ಬೆಳ್ತಂಗಡಿ 14, ಸುಳ್ಯ 5 ಹಾಗೂ ಹೊರ ಜಿಲ್ಲೆಯಿಂದ ಬಂದ 10 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇಂದು ಬರೋಬ್ಬರಿ 498 ಮಂದಿ ಗುಣಮುಖರಾಗಿದ್ದರೇ ಆಕ್ವೀವ್ ಕೇಸ್ 2,349 ಇದೆ. ಈವರೆಗೂ ಒಟ್ಟು 7,825 ಕೊರೋನಾ ಪಾಸಿಟಿವ್ ಕೇಸ್ ಗಳಿವೆ.
ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಮರಳಿ ನೀಡಿದ ಆಟೋ ಚಾಲಕ
ಆಟೋ ಚಾಲಕರೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ನ್ನು ಮರಳಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ನಿಸ್ಸಾಮುದ್ದೀನ್ ಕಾಲೋನಿಯ...