ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ಮತ್ತೆ ಬರೋಬ್ಬರಿ 274 ಪ್ರಕರಣಗಳು ಪತ್ತೆಯಾಗಿದ್ದು, ಸಿಲಿಕಾನ್ ಸಿಟಿ ಜನರು ಬೆಚ್ಚಿ ಬೀಳುವಂತೆ ಮಾಡಿದೆ. ಇದರೊಂದಿಗೆ ರಾಜ್ಯಾದ್ಯಂತ ಕೊರೊನಾ ಅಬ್ಬರ ಮುಂದುವರೆದಿದ್ದು, 361 ಮಂದಿಗೆ ಪಾಸಿಟಿವೆ ಬಂದಿದೆ. ಜತೆಗೆ ಮಹಾಮಾರಿ ಕೊರೊನಾಗೆ 8 ಮಂದಿ ಉಸಿರು ನಿಲ್ಲಿಸಿದ್ದಾರೆ.
ಬೆಂಗಳೂರು ದಕ್ಷಿಣವೊಂದರಲ್ಲೇ 67 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ನಂತರ ಬಳ್ಳಾರಿಯಲ್ಲಿ 26, ಬೀದರ್ 8. ಉಡುಪಿಯಲ್ಲಿ 14 ಪ್ರಕರಣಗಳು ದಾಖಲಾಗಿವೆ. ವಿಧಾನಸೌಧದ ಭದ್ರತಾ ವಿಭಾಗದ ಡಿಸಿಪಿ ಕಚೇರಿಯ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಡಿಸಿಪಿ ಕಚೇರಿಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ವಿಧಾನಸೌಧದ ನೆಲಮಹಡಿಯ ಡಿಸಿಪಿ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
ಶಾಸಕರ ಭವನದ ಎಲ್ಲಾ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಜತೆಗೆ ಶಾಸಕರ ಭವನದಲ್ಲಿ ಅನಗತ್ಯವಾಗಿ ತಂಗಿರುವ ಹೊರಗಿನವರನ್ನು ತೆರವು ಮಾಡಲಾಗುತ್ತಿದೆ.
ಆನೇಕಲ್ನಲ್ಲೂ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಿರಾಣಿ ಅಂಗಡಿ ಮಾಲೀಕನಿಂದ ಐವರಿಗೆ ಸೋಂಕು ಹರಡಿದೆ ಎನ್ನಲಾಗಿದೆ.
ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್
ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...








