ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೂಡ ಕೊರೊನಾ ಸ್ಫೋಟ ಮುಂದುವರೆದಿದ್ದು, ಮತ್ತೆ 322 ಮಂದಿಗೆ ಮಹಾಮಾರಿ ಅಂಟಿಕೊAಡಿದೆ.
ಕೊರೊನಾ ಪಾಸಿಟಿವ್ ಪಟ್ಟಿಯಲ್ಲಿ ಬೆಂಗಳೂರಿನ ನಂ.1 ಸ್ಥಾನ ಮುಂದುವರೆದಿದ್ದು, ಇಂದು 107 ಮಂದಿಗೆ ಸೋಂಕು ವಕ್ಕರಿಸಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1505ಕ್ಕೆ ತಲುಪಿದ್ದು, ಮತ್ತೆ 6 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಕೊರೊನಾಗೆ 8 ಮಂದಿ ಮೃತಪಟ್ಟಿದ್ದು, ಇದರಲ್ಲಿ ಬೆಂಗಳೂರಿನಲ್ಲಿ 6 ಮಂದಿ ಹಾಗೂ ಬಳ್ಳಾರಿ , ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 9721ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ ಕೂಡ 150ಕ್ಕೆ ಬಂದು ನಿಂತಿದೆ.
ಬೆAಗಳೂರು ನಗರ ಬಳ್ಳಾರಿ 52, ಬೀದರ್ 22, ಮೈಸೂರು 21, ವಿಜಯಪುರ 16 ಪ್ರಕರಣಗಳು ವರದಿಯಾಗಿವೆ. ವಿದೇಶಗಳಿಂದ ಬಂದ 5 ಹಾಗೂ ಹೊರರಾಜ್ಯಗಳಿಂದ ಬಂದ 64 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...








