ತಗ್ಗಿದ ಕೊರೊನಾ ಅಬ್ಬರ : ಇಂದು 16,604 ಕೇಸ್ ಪತ್ತೆ, 44,473 ಜನ ಡಿಸ್ಚಾರ್ಜ್ karnataka
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ತಗ್ಗಿದಂತೆ ಕಾಣುತ್ತಿದ್ದು, ಇಂದು 16,604 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.44,473 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 16,604 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26,04,431 ಕ್ಕೆ ಏರಿಕೆಯಾಗಿದೆ.
ಇದೇ ಅವಧಿಯಲ್ಲಿ 411 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 29,090 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇವತ್ತು 44,473 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 22,61,590 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿನ್ನೂ 3,13,730 ಸಕ್ರಿಯ ಪ್ರಕರಣಗಳು ಇವೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 3992 ಜನರಿಗೆ ಸೋಂಕು ತಗಲಿದ್ದು, 242 ಸೋಂಕಿತರು ಮೃತಪಟ್ಟಿದ್ದಾರೆ. 1,46,043 ಸಕ್ರಿಯ ಪ್ರಕರಣಗಳಿದ್ದು, ಇಂದು 20,332 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.