ಕೊರೊನಾಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ 50 ಸಾವಿರ ರೂ. : ಬಿಸಿಪಾ ಘೋಷಣೆ b c patil
ಹಿರೇಕೆರೂರು : ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಚಿವ ಬಿ.ಸಿ.ಪಾಟೀಲ್ ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯದೆಲ್ಲೆಡೆ ಕೊರೊನಾ ಎರಡನೇ ಅಲೆ ಜೋರಾಗಿ ಬೀಸುತ್ತಿದೆ. ಸಾಕಷ್ಟು ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸಾವಿರಾರು ಮಂದಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಅದರಂತೆ ಹಿರೇಕೆರೂರು ತಾಲೂಕಿನಲ್ಲೂ ಕೊರೊನಾ ಕಾಟ ಮುಂದುವರೆದಿದ್ದು, ಅನೇಕರು ಕೊನೆಯುಸಿರೆಳೆದಿದ್ದಾರೆ.
ಹೀಗಾಗಿ ಹಿರೆಕೆರೂರು ತಾಲೂಕಿನಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟ ಕುಟುಂಬದ ಸದಸ್ಯರ ಮನೆಗೆ ನಾಳೆ ಬಿ.ಸಿ.ಪಾಟೀಲ್ ಭೇಟಿ ನೀಡಿ, ವೈಯಕ್ತಿಕವಾಗಿ 50 ಸಾವಿರ ರೂಪಾಯಿ ನೀಡಲಿದ್ದಾರೆ.