ಬಸವೇಶ್ವರ ಪುತ್ಥಳಿಗೆ ಮಾಸ್ಕ್ ಹಾಕಿ ಬಸವ ಜಯಂತಿ ಆಚರಣೆ mysore
ಮೈಸೂರು : ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಮಾಸ್ಕ್ ಧಾರಣೆ ಮಾಡುವ ಮೂಲಕ ಬಸವ ಜಯಂತಿಯನ್ನ ಸರಳವಾಗಿ ಆಚರಿಸಲಾಗಿದೆ.
ಮೈಸೂರಿನ ಅಗ್ರಹಾರದಲ್ಲಿರುವ ಶ್ರೀ ಹೊಸಮಠದ ಆವರಣದಲ್ಲಿ ಮಠದ ಅಧ್ಯಕ್ಷರಾದ ಚಿದಾನಂದ ಸ್ವಾಮೀಜಿ ಬಸವೇಶ್ವರರ ಪ್ರತಿಮೆಗೆ ಮಾಸ್ಕ್ ಧಾರಣೆ ಮಾಡಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು.
ಇದಲ್ಲದೆ ನಗರದ ಗನ್ ಹೌಸ್ ನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ವೀರಶೈವ ಲಿಂಗಾಯತ ಸಂಘ ಹಾಗೂ ಬಸವ ಬಳಗಗಳ ಒಕ್ಕೂಟದಿಂದ ಕಾರ್ಯಕ್ರಮ ಸರಳ ಬಸವ ಜಯಂತಿ ಹಮ್ಮಿಕೊಳ್ಳಲಾಗಿತ್ತು.
ಇದರಲ್ಲಿ ಮೈಸೂರಿನ ಕುವೆಂಪುನಗರದ ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಮೂವರಿಗೆ “ಕಾಯಕ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.