ಮಂಡ್ಯದಲ್ಲಿ ಕೊರೊನಾ ಸ್ಫೋಟ : ಓಂ ಶಕ್ತಿ ಯಾತ್ರೆಯಿಂದ ವಾಪಸ್ ಬಂದವರಲ್ಲಿ ಸೋಂಕು corona virus cases in mandya saaksha tv
ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇಂದು ಜಿಲ್ಲೆಯಲ್ಲಿ 13 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ಹದಿಮೂರು ಕೇಸ್ ಗಳು ಓ ಶಕ್ತಿ ಯಾತ್ರೆ ಮುಗಿಸಿಕೊಂಡು ವಾಪಸ್ ಆದವರೇ ಆಗಿದ್ದಾರೆ.
ಇದರೊಂದಿಗೆ ಓಂ ಶಕ್ತಿ ಯಾತ್ರೆಯ ಹಿನ್ನೆಲೆ ಹೊಂದಿರುವ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 360 ಕ್ಕೆ ಏರಿಕೆಯಾಗಿದೆ.
ನಿನ್ನೆವರೆಗೆ 347 ಮಂದಿಗೆ ಸೋಂಕು ಧೃಢ ಪಟ್ಟಿತ್ತು. ಇಂದು 13 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಈ ಸಂಖ್ಯೆ ಸಂಜೆ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇತ್ತ ದೇಶದಲ್ಲಿ ಕೊರೊನಾ ಮೂರನೇ ಅಲೆ ಕಾಣಿಸಿಕೊಂಡಾಗಿನಿಂದಲೂ ಮಂಡ್ಯ ಜಿಲ್ಲೆಯಲ್ಲಿ ಜನವರಿ 1 ರಿಂದ ಇಲ್ಲಿಯವರೆಗೆ 1284 ಮಂದಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1185 ತಲುಪಿದೆ.