ಬೆಂಗಳೂರು: ಕರ್ನಾಟಕದ ಪಾಲಿಗೆ ಬುಧವಾರ ಕೊರೊನಾ ಮಹಾಸ್ಫೋಟವಾಗಿದೆ. ಇದೇ ಮೊದಲ ಬಾರಿಗೆ ಸೋಂಕಿನ ಸಂಖ್ಯೆ 2 ಸಾವಿರ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ.
ರಾಜ್ಯದಲ್ಲಿ ಇಂದು ಬರೋಬ್ಬರಿ 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28, 877ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ 54 ಮಂದಿ ಮಹಾಮಾರಿಗೆ ಉಸಿರು ನಿಲ್ಲಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲೂ ಇಂದು ಬರೋಬ್ಬರಿ 1148 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12 ಸಾವಿರ ಗಡಿ ದಾಟಿದೆ.
ಭಾನುವಾರ ಲಾಕ್ಡೌನ್ ಸೇರಿದಂತೆ ರಾಜ್ಯ ಸರ್ಕಾರ ಯಾವುದೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರೂ ಸೋಂಕು ಹರಡುವಿಕೆ ತಡೆಗಟ್ಟಲು ಸಾಧ್ಯವಾಗಿಲ್ಲ. ದಿನದಿಂದ ದಿನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವುದು ನಾಗರಿಕರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...








