ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 1498 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26,817ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 800 ಮಂದಿಗೆ ಕೊರೊನಾ ವಕ್ಕರಿಸಿದೆ. ಇಂದು 15 ಮಂದಿ ಮಹಾಮಾರಿಗೆ ಉಸಿರು ಚೆಲ್ಲಿದ್ದಾರೆ, ಒಟ್ಟು ಸಾವಿನ ಸಂಖ್ಯೆ 416ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಇರುವ 80 ಕೋವಿಡ್ ಲ್ಯಾಬ್ ಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ದಿನಕ್ಕೆ 50,000 ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದೆ. ಈ ಕುರಿತಂತೆ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜಿನೀಶ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ನಿರ್ದೇಶಕ ಡಾ.ಪಿ.ಜಿ.ಗಿರೀಶ್ ಆವರೊಂದಿಗೆ ಸಭೆ ನಡೆಸಲಾಯಿತು ಎಂದು ಸುಧಾಕರ್ ತಿಳಿಸಿದ್ದಾರೆ.