ಹಾವೇರಿ: ಕಳೆದ ತಿಂಗಳುವರೆಗೆ ಗ್ರೀನ್ ಝೋನ್ನಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ Pಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರುತ್ತಿವೆ. ಹೀಗಾಗಿ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಹಾವೇರಿ ಜಿಲ್ಲಾಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಬೆಡ್ ಇಲ್ಲದಿದ್ದರೂ ಕೊರೊನಾ ಸೋಂಕಿತನನ್ನು ಆಸ್ಪತ್ರಗೆ
ಕರೆ ತರಲಾಗಿತ್ತು. ಹೀಗಾಗಿ ಎರಡು ಗಂಟೆಗಳ ಕಾಲ ಸೋಂಕಿತನನ್ನು ಅಂಬ್ಯುಲೆನ್ಸ್ನಲ್ಲಿಯೇ ಇರಿಸಲಾಗಿತ್ತು.
ಹಾವೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿದ್ದಕ್ಕಾಗಿ ಹಿರೆಕೇರೂರು ತಾಲೂಕಾಸ್ಪತ್ರೆಗೆ ರವಾನಿಸಲು ವೈದ್ಯಾಧಿಕಾರಿಗಳು ಚಿಂತನೆ ನಡೆಸಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಪರ್ವತ ಸಿದ್ದಗಿರಿ ಗ್ರಾಮದ ಸೋಂಕಿತ ಮೊನ್ನೆ ಪರಾರಿಯಾಗಿ ನಾಪತ್ತೆಯಾಗಿದ್ದ. ಈತನನ್ನು ರಾಣೆಬೆನ್ನೂರಿನಲ್ಲಿ ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾಗ ಈ ಘಟನೆ ನಡೆದಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








