ಮಂಗಳೂರು: ಬೆಂಗಳೂರು ನಂತರ ದಕ್ಷಿಣ ಕನ್ನಡ ಜಿಲ್ಲೆ ಮಾರಕ ಕೊರೋನಾದಿಂದ ತತ್ತರಿಸಿ ಹೋಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಕೊರೋನಾಗೆ ಬಲಿಯಾಗಿದ್ದಾರೆ.
ಬೆಳಿಗ್ಗೆ ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೋನಾಗೆ ಬಲಿಯಾಗಿದ್ದರು. ಇದೀಗ ಮತ್ತೆ ಓರ್ವ ಪುರುಷ, ಮಹಿಳೆ ಸೇರಿ ಇಂದು ಒಟ್ಟು ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಗಿದೆ.
ಮಂಗಳೂರಿನ ಅಶೋಕನಗರದ 60 ವರ್ಷದ ವೃದ್ಧ ಹಗೂ ಕುಳೂರು ಗುಡ್ಡೆಯಂಗಡಿ ನಿವಾಸಿ 52 ವರ್ಷದ ಮಹಿಳೆ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.
ನಿನ್ನೆ ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1012ಕ್ಕೆ ಏರಿಕೆ ಕಂಡಿದೆ.