ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಲೆಕ್ಕ ಪರಿಶೋಧಕ ಚಂದ್ರಶೇಖರ್ (Chandrashekar) ಆತ್ಮಹತ್ಯೆಗೆ ಕಾರಣ ಏನು ಎಂಬುವುದು ಚಾರ್ಜ್ ಶೀಟ್ ನಲ್ಲಿ ಸಲ್ಲಿಕೆಯಾಗಿದೆ.
ಆಡಳಿತ ನಿರ್ದೇಶಕ ಪದ್ಮನಾಭ್ (Padmanabh) ಮತ್ತು ಲೆಕ್ಕಾಧಿಕಾರಿ ಪರುಶರಾಮ್ (Parashuram) ಆತ್ಮಹತ್ಯೆಗೆ ಕಾರಣ ಎಂದು ವಿಶೇಷ ತನಿಖಾ (SIT) ಚಾರ್ಜ್ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಎಸ್ ಐಟಿಯು ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ (Shivamogga) ಜಿಲ್ಲಾಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅಲ್ಲದೇ, ಹಗರಣದಲ್ಲಿ ಒಂದಿಷ್ಟು ಹಣವನ್ನು ಚಂದ್ರಶೇಖರ್ ಪಡೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಚಂದ್ರಶೇಖರ್ ಅವರನ್ನು ಗೋವಾ ಮತ್ತು ಹೈದರಾಬಾದ್ಗೆ ಕರೆದುಕೊಂಡು ಹೋಗಿ ಪದ್ಮನಾಭ್ ಮತ್ತು ಪರಶುರಾಮ್ ಒತ್ತಡ ಹಾಕಿದ್ದರು ಎಂಬುವುದು ಸಿಐಟಿ ತನಿಖೆಯಿಂದ ಬಹಿರಂಗವಾಗಿದೆ. ಪ್ರಕರಣ ಬೆಳಕಿಗೆ ಬಂದರೆ ನೀನೊಬ್ಬನೇ ಜೈಲಿಗೆ ಹೋಗಬೇಕಾಗುತ್ತದೆ. ನಿನ್ನ ವಿರುದ್ಧ ನಾವೇ ದೂರು ನೀಡುತ್ತೇವೆ. ನೀನು ಹಣ ಪಡೆದಿದ್ದಿ ಎಂದು ಹೆದರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಭಯಭೀತರಾಗಿದ್ದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.
300 ಪುಟಗಳ ದೋಷಾರೋಪ ಪಟ್ಟಿಗೆ ಚಂದ್ರಶೇಖರ್ ಪತ್ನಿ ಮತ್ತು ನಿಗಮದ ಅಧಿಕಾರಿಗಳನ್ನು ಎಸ್ ಐಟಿ ಸಾಕ್ಷ್ಯವನ್ನಾಗಿ ಮಾಡಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಹೆಸರನ್ನು ಎಸ್ಐಟಿ ಕೈ ಬಿಟ್ಟಿದೆ.
ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...





