ಪರಿಷತ್ ಗಲಾಟೆ | ಪೂರ್ವನಿಯೋಜಿತ ಸಂಚು ಎಂದ ಈಶ್ವರಪ್ಪ
ಹುಬ್ಬಳ್ಳಿ : ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಪೂರ್ವ ನಿಯೋಜಿತ ಸಂಚು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಈಶ್ವರಪ್ಪ, ವಿಧಾನ ಪರಿಷತ್ ಇತಿಹಾಸದಲ್ಲೇ ಈ ರೀತಿಯ ವಿಷಾದಕರ ಘಟನೆ ನಡೆದದ್ದು ಇದೇ ಮೊದಲು.
ಪರಿಷತ್ ನಲ್ಲಿ ಬಿಜೆಪಿ, ಜೆಡಿಎಸ್ ಗೆ ಬಹುಮತ ಇರಲಿಲ್ಲವೆಂದು ರಾಜ್ಯದ ಜನರೆದುರು ಡಿಕೆಶಿ ಹಾಗೂ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ.
ಬಂಡತನದಿಂದ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಮಾಡಿದ ಕುತಂತ್ರ ರಾಜಕಾರಣವಿದು. ಜೆಡಿಎಸ್, ಬಿಜೆಪಿ ಒಂದಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದೇವೆ.
ಪ್ರತಾಪ್ ಚಂದ್ರ ಶೆಟ್ಟಿ ಸಜ್ಜನ ರಾಜಕಾರಣಿ, ಅವರಿಗೂ ಕಪ್ಪು ಚುಕ್ಕೆ ಬರುವಂತೆ ಮಾಡಿದ್ದಾರೆ. ಇದೊಂದು ಪೂರ್ವನಿಯೋಜಿತ ಸಂಚು ಎಂದು ಕಿಡಿಕಾರಿದರು.
ನನಗೆ ಆರ್ ಎಸ್ ಎಸ್ ಅಲರ್ಜಿ : ಸಿಎಂ ಇಬ್ರಾಹಿಂ
ಇನ್ನು ಸಭಾಪತಿಗಳು ಬಹುಮತವಿಲ್ಲದೇ ಅಲ್ಪಸಂಖ್ಯಾತರಾದ ಬಳಿಕ ರಾಜೀನಾಮೆ ಕೊಡಬೇಕಿತ್ತು. ಪರಿಷತ್ ನಲ್ಲಿ ನಡೆದ ಘಟನೆಗೆ ಸಿದ್ದರಾಮಯ್ಯ ಮತ್ತು ಡಿಕೆಶಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ ಈಶ್ವರಪ್ಪ,
ಬಹುಮತ ಇಲ್ಲದಿರುವವರನ್ನು ಮುಂದುವರಿಸಲು ಸಾಧ್ಯವೇ ಇಲ್ಲ. ದಾದಾಗಿರಿ ಮಾಡಿಕೊಂಡು ಬಹುಮತ ಇಲ್ಲದಿದ್ದರೂ ನಾವು ಸಭಾಪತಿಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎನ್ನುವುದನ್ನು ಜನ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel