ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..!

admin by admin
February 20, 2026
in Newsbeat, Sports, ಕ್ರೀಡೆ
cm cup badminton league 2026

cm cup badminton league 2026

Share on FacebookShare on TwitterShare on WhatsappShare on Telegram

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..!

9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೇ ಶುರುವಾಗಿದೆ. ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಂಗಣದಲ್ಲಿ ನಡೆಯಲಿರುವ ಎರಡು ದಿನಗಳ ಟೂರ್ನಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಜನಪ್ರತಿನಿಧಿಗಳು, ಐಎಎಸ್‌-ಐಪಿಎಸ್‌ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ವೈದ್ಯರು, ಸ್ಯಾಂಡಲ್‌ವುಡ್ ತಾರೆಯರು ಹಾಗೂ ಪತ್ರಕರ್ತರು ಜೊತೆಯಾಗಿ ಕ್ರೀಡಾ ಮನೋಭಾವದಿಂದ ಹೋರಾಟ ನಡೆಸಲಿದ್ದಾರೆ. ಲೀಡರ್ಸ್ ಪ್ಲೇ.. ಫ್ರೆಂಡ್‌ಶಿಫ್ ವಿನ್ ಎಂಬ ಘೋಷ ವಾಕ್ಯದೊಂದಿಗೆ ಆರಂಭಗೊಂಡಿರುವ ಮೊದಲ ಆವೃತ್ತಿಯ ಟೂರ್ನಿಯ ಲಾಂಛನವನ್ನು ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಅನಾವರಣಗೊಳಿಸಿದ್ದಾರೆ.

ಟೂರ್ನಿಯಲ್ಲಿ ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್, ಇನ್‌ಸ್ಪೈರ್ ಚಾಲೆಂಜರ್ಸ್, ದಿ ಕೆಫೆ ದಿವ್ಯಂ, ಎಟಿಎಸ್ ಅಟ್ಯಾಕರ್ಸ್, ಪ್ರೋ ವಿನ್ ಪ್ಯಾಂಥರ್ಸ್, ಎಸ್ಥೆಟಿಕ್ ಅಟ್ಯಾಕರ್ಸ್, ಟೆಲಿಕಾಂ ಸ್ಕೈ ಸ್ಟ್ರೈಕರ್ಸ್, ಕೆಜಿಎಫ್ ಸ್ಮಾಷರ್ಶ್ ತಂಡಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆಯಲಿದೆ.
ಲೀಗ್ ಮಾದರಿಯಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಎರಡು ಗುಂಪುಗಳಾಗಿ ತಂಡಗಳನ್ನು ವಿಂಗಡಿಸಲಾಗಿದೆ. ಎ ಬಣದಲ್ಲಿ ಇನ್‌ಸ್ಪೈಯರ್ ಚಾಲೆಂಜರ್ಸ್, ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್, ಎಸ್ಥೆಟಿಕ್ ಅಟ್ಯಾಕರ್ಸ್, ಟೀಮ್ ಕೆಫೆ ದಿವ್ಯಂ ತಂಡಗಳು ಸೆಣಸಾಟ ನಡೆಸಲಿವೆ. ಹಾಗೆಯೇ ಬಿ ಬಣದಲ್ಲಿ ಕೆಜಿಎಫ್ ಸ್ಮಾಷರ್ಸ್‌, ಟೆಲಿಕಾಂ ಸ್ಕೈ ಸ್ಟೈಕರ್ಸ್, ಎಟಿಎಸ್ ಅಟ್ಯಾಕರ್ಸ್, ಪ್ರೋ ವಿನ್ ಪ್ಯಾಂಥರ್ಸ್ ತಂಡಗಳು ಹೋರಾಟ ನಡೆಸಲಿವೆ. ಎರಡು ಗುಂಪುಗಳಲ್ಲಿ ಅಗ್ರ ಸ್ಥಾನ ಪಡೆಯುವ ಎರಡು ತಂಡಗಳು ಸೆಮಿಫೈನಲ್‌ನಲ್ಲಿ ಕಾದಾಟ ನಡೆಸಲಿವೆ.
ಟೂರ್ನಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಪೊನ್ನಣ್ಣ, ಶಾಸಕರಾದ ಶರತ್ ಬಚ್ಚೇಗೌಡ, ಡಾ. ಮಂಥರ್ ಗೌಡ, ಮಾಜಿ ಶಾಸಕ ನಾರಾಯಣಸ್ವಾಮಿ, ಐಎಎಸ್ ಅಧಿಕಾರಿಗಳಾದ ಸೆಲ್ವಕುಮಾರ್, ಜಗದೀಶ್, ಐಪಿಎಸ್ ಅಧಿಕಾರಿಗಳಾದ ಅಲೋಕ್ ಕುಮಾರ್, ರಮೇಶ್ ಬಾನೋಥ್‌, ಕೆಪಿಎಸ್‌ ಅಧಿಕಾರಿ ಸತೀಶ್ ಕುಮಾರ್ ಸೇರಿದಂತೆ ಇತರರು ಪವರ್ ಪ್ಲೇ ವಿಭಾಗದಲ್ಲಿ ಆಡಲಿದ್ದಾರೆ. ಟೂರ್ನಿಯಲ್ಲಿ ಒಟ್ಟು 128 ಆಟಗಾರರು ಕಣಕ್ಕಿಳಿಯಲಿದ್ದಾರೆ.

ಈಗಾಗಲೇ ಎಂಟೂ ಫ್ರಾಂಚೈಸಿಗಳ ಆಟಗಾರರು ಸಾಕಷ್ಟು ಪೂರ್ವತಯಾರಿ ನಡೆಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಚಕವಾಗಿ ಸಾಗಲಿರುವ ವಿನೂತನ ಮಾದರಿಯ ಸಿಎಂ ಬ್ಯಾಡ್ಮಿಂಟನ್ ಟೂರ್ನಿ ನಮ್ಮ ಬೆಂಗಳೂರು ಸಾಕ್ಷಿಯಾಗಲಿದೆ.

Tags: #9dreamz#bengalluru#cmcup2026#cmcupbadminton#saakshatvkarnatakasportsnews
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram