ಕಾಂಗ್ರೆಸ್ ಪರ ಕೆಲಸ ಮಾಡ್ತೀನಿ.. ದೇಶಕ್ಕೆ ಕಾಂಗ್ರೆಸ್ ಅಗತ್ಯ : ಮಧುಬಂಗಾರಪ್ಪ
ಬೆಂಗಳೂರು : ಮಧು ಬಂಗಾರಪ್ಪ ಕಾಂಗ್ರೆಸ್ ಸೇರಲಿದ್ದಾರೆ ಅನ್ನೋ ವದಂತಿಗಳಿಗೆ ಕೊನೆಗೂ ಸ್ಪಷ್ಟತೆ ಸಿಕ್ಕಿದೆ. ಸ್ವತಃ ಮಧುಬಂಗಾರಪ್ಪನವರೇ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಅಧಿಕೃತವಾಗಿ ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೀನಿ. ಇಂದಿನಿಂದಲೇ ಕೆಲಸ ಮಾಡಲು ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಹಿರಿಯರು, ಅವರು ಸಿಎಂ ಆಗಿದ್ದವರು ನಮ್ಮ ತಂದೆನೂ ಸಿಎಂ ಆಗಿದ್ದವರು. ಹೀಗಾಗಿ ಅವರಿಗೆ ಭೇಟಿಯಾಗಿದ್ದೀನಿ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಆಗ್ತೀನಿ ಎಂದು ತಿಳಿಸಿದ್ರು.
ಇದೇ ವೇಳೆ ಕುಮಾರಸ್ವಾಮಿ ಬಗ್ಗೆ ಮಾತನಾಡಿ, ನನಗೆ ಅವರ ಬಗ್ಗೆ ವೈಯಕ್ತಿಕ ಗೌರವ ಇದೆ. ಈ ಸಂದರ್ಭದಲ್ಲಿ ದೇಶಕ್ಕೆ ಕಾಂಗ್ರೆಸ್ ಅಗತ್ಯತೆ ಇದೆ. ನನ್ನ ಹಾಗೂ ಕುಮಾರಸ್ವಾಮಿ ನಡುವೆ ವೈಯಕ್ತಿಕ ಏನು ಇಲ್ಲ.
ಈಗ ಯಾವುದೇ ಚರ್ಚೆ ಬೇಡ. ಇವತ್ತು ಮನಸಾರೆ ಕಾಂಗ್ರೆಸ್ ಹೋಗಿದ್ದೀನಿ ಎಂದು ಮಾಹಿತಿ ನೀಡಿದ್ರು.
ಇನ್ನು ಚುನಾವಣೆ ಅನ್ನೋದು ಎಕ್ಸಾಂ ತರ. ನಾಯಕತ್ವ ಎಂದೂ ಸೋಲೋದಿಲ್ಲ. ನಾನು ಜೆಡಿಎಸ್ ನಲ್ಲಿ ಯಾವತ್ತು ಅಧಿಕಾರ ಅನುಭವಿಸಿಲ್ಲ.
ಕಾಂಗ್ರೆಸ್ ನಲ್ಲಿ ಬೆಳೆಯಲು ಅವಕಾಶ ಇದೆ, ಅದಕ್ಕೆ ಸೇರ್ಪಡೆ ಆಗುತ್ತಿದ್ದೇನೆ.
ಏಪ್ರಿಲ್ ತಿಂಗಳಿನಲ್ಲಿ ಸಭೆ ಮಾಡಿ ಲಕ್ಷಾಂತರ ಜನರನ್ನ ಸೇರಿಸಿ ಸಮಾವೇಶ ಮಾಡುತ್ತೇವೆ ಎಂದು ಮಧುಬಂಗಾರಪ್ಪ ತಿಳಿಸಿದ್ದಾರೆ.