ನವದೆಹಲಿ: ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಆಗ್ರಹಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ (Arvind Kejriwal) ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ಒಪ್ಪಿಗೆ ಸೂಚಿಸಿಲ್ಲ.
ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನನ್ನು 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಸಲ್ಲಿಸಿರುವ ಮನವಿಯ ತುರ್ತು ವಿಚಾರಣೆಗೆ ಕೋರ್ಟ್ ನಕಾರ ಎಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಜೂನ್ 2 ರಂದು ತಿಹಾರ್ ಜೈಲಿಗೆ ಹಿಂತಿರುಗಬೇಕಾಗಿದೆ.
ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಮುಖ್ಯಮಂತ್ರಿಗೆ ಸ್ವಾತಂತ್ರ್ಯ ನೀಡಲಾಗಿರುವುದರಿಂದ ಅರ್ಜಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿ ಸ್ವೀಕರಿಸಲು ನಿರಾಕರಿಸಿತು. ಕೇಜ್ರಿವಾಲ್ ಮೇ 10 ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ಮಧ್ಯಂತರ ಜಾಮೀನು ನೀಡಿತ್ತು.
ಕೇಜ್ರಿವಾಲ್ ಬಂಧನದ ನಂತರ 7 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ. ಅವರ ದೇಹದಲ್ಲಿ ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಹೀಗಾಗಿ ವೈದ್ಯರನ್ನು ಸಂಪರ್ಕಿಸಲಾಗಿದೆ. ಅವರು PET-CT ಸ್ಕ್ಯಾನ್ ಮತ್ತು ಇತರ ಹಲವು ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ. ತನಿಖೆಯನ್ನು ಪೂರ್ಣಗೊಳಿಸಲು ಅವರು 7 ದಿನಗಳ ಕಾಲಾವಕಾಶ ಕೋರಿದ್ದಾರೆ’ ಎಂದು ಎಎಪಿ ಹೇಳಿತ್ತು. ಆದರೆ, ಪೀಠವು ಇದಕ್ಕೆ ಒಪ್ಪಿಗೆ ನೀಡಿಲ್ಲ.