ಲಕ್ನೋ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದ್ದು, ಮತ್ತೊಮ್ಮೆ ಸಂಕಷ್ಟ ಶುರುವಾಗಿದೆ.
ಲೋಕಸಭಾ ಚುನಾವಣೆ ವೇಳೆ ʻಮೋದಿ ಉಪನಾಮʼ ಬಳಸಿ ಟೀಕಿಸಿ ಸಂಕಷ್ಟಕ್ಕೆ ಗುರಿಯಾಗಿರುವ ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಿದೆ. 2018ರಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಸುಲ್ತಾನ್ಪುರದ MP/MLA ಕೋರ್ಟ್ (MP-MLA Court) ಸಮನ್ಸ್ (Court Summoned) ಜಾರಿ ಮಾಡಿದೆ.
ಜ 6ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಹೇಳಿದೆ ಎಂದು ನ್ಯಾಯವಾದಿ ಸಂತೋಷ್ ಪಾಂಡೆ ಹೇಳಿದ್ದಾರೆ. 2018ರ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಆರಂಭದಲ್ಲೇ ಸಮನ್ಸ್ ನೀಡಿತ್ತು. ಸದ್ಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ರಾಹುಲ್ ಗಾಂಧಿ ಅವರು, ಬಿಜೆಪಿ ಅಧ್ಯಕ್ಷ ಕೊಲೆ ಆರೋಪಿ ಎಂಬುದನ್ನು ದೇಶದ ಜನ ಮರೆತುಬಿಡುತ್ತಾರೆ, ಆದ್ರೆ ಅದೇ ಸತ್ಯ. ಸದಾ ಪ್ರಾಮಾಣಿಕತೆ ಮತ್ತು ಸಭ್ಯತೆಯ ಬಗ್ಗೆ ಮಾತನಾಡುವ ಪಕ್ಷವು ಕೊಲೆ ಆರೋಪ ಹೊತ್ತ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡುತ್ತದೆ ಎಂದು ಆರೋಪಿಸಿದ್ದರು.