‘ಮಾಹಾಮಾರಿ’ ನಿವಾರಣೆಗೆ ರಾಮಬಾಣವಾಗುತ್ತಾ ಅಶ್ವಗಂಧ..? ಅಧ್ಯಯನ ಏನ್ ಹೇಳುತ್ತೆ..?
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಅಲ್ಪ ಮಟ್ಟದ ಸಮಾಧಾನಕರ ಸಂಗತಿಯೊಂದು ಗೊತ್ತಾಗಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವುದನ್ನು ಉತ್ತೇಜಿಸುವಲ್ಲಿ ಅಶ್ವಗಂಧದ ಬಳಕೆಯ ಕುರಿತು ಅಖಿಲ ಭಾರತ ಆಯುರ್ವೇದ ಸಂಸ್ಥೆ ಮತ್ತು ಬ್ರಿಟನ್ನ ಲಂಡನ್ ಸ್ಕೂಲ್ ಆಫ್ ಹೈಜೀನ್ ಆ್ಯಂಡ್ ಟ್ರೋಪಿಲ್ ಮೆಡಿಸಿನ್ ಜಂಟಿಯಾಗಿ ಅಧ್ಯಯನ ನಡೆಸಲಿವೆ. ಈ ಮೂಲಕ ಭಾರತದ ಸಾಂಪ್ರದಾಯಿಕ ಔಷಧ ಪದ್ಧತಿಯು ಮಹತ್ತರ ಮೈಲಿಗಲ್ಲು ಸಾಧಿಸಿದೆ.
ಅಧ್ಯಯನದ ಒಪ್ಪಂದಕ್ಕೆ ಅಖಿಲ ಭಾರತ ಆಯುರ್ವೇದ ಸಂಸ್ಥೆ ಮತ್ತು ಬ್ರಿಟನ್ನ ‘ಲಂಡನ್ ಸ್ಕೂಲ್ ಆಫ್ ಹೈಜೀನ್ ಆ್ಯಂಡ್ ಟ್ರೋಪಿಲ್ ಮೆಡಿಸಿನ್ ಸಂಸ್ಥೆಗಳೆರಡೂ ಒಡಂಬಡಿಕೆ ಮಾಡಿಕೊಂಡಿವೆ. ಬ್ರಿಟನ್ನ ಲೀಸೆಸ್ಟರ್, ಬರ್ಮಿಂಗ್ಹ್ಯಾಮ್ ಮತ್ತು ಲಂಡನ್ನಲ್ಲಿ 2,000 ಜನರ ಮೇಲೆ ಅಶ್ವಗಂಧದ ವೈದ್ಯಕೀಯ ಪ್ರಯೋಗಗಳು ನಡೆಯಲಿವೆ ಎಂದು ಆಯುಷ್ ಇಲಾಖೆ ತಿಳಿಸಿದೆ.
ಡಿಜಿಟಲ್ ಪಾವತಿ : e-RUPIಗೆ ನಾಳೆ ಪ್ರಧಾನಿ ಮೋದಿ ಚಾಲನೆ
ಅಶ್ವಗಂಧ ಸಾಂಪ್ರದಾಯಿಕ ಭಾರತೀಯ ಮೂಲಿಕೆಯಾಗಿದ್ದು, ದೇಹದ ಶಕ್ತಿಯನ್ನು ವೃದ್ಧಿಸಲು, ಒತ್ತಡವನ್ನು ತಗ್ಗಿಸಲು, ಪ್ರತಿರೋಧ ವ್ಯವಸ್ಥೆಯನ್ನು ಬಲಪಡಿಸಲು ನೆರವಾಗುತ್ತದೆ. ಎರಡೂ ಸಂಸ್ಥೆಗಳು ನಡೆಸುತ್ತಿರುವ ಈ ಪ್ರಯೋಗವೇನಾದರೂ ಯಶಸ್ವಿಯಾದರೆ ಭಾರತದ ಸಾಂಪ್ರದಾಯಿಕ ಔಷಧ ಪದ್ಧತಿಯ ಮೂಲಿಕೆಯೊಂದಕ್ಕೆ ವೈಜ್ಞಾನಿಕ ಮಾನ್ಯತೆ ದೊರೆತಂತಾಗುತ್ತದೆ.
ವಿವಿಧ ಕಾಯಿಲೆಗಳಲ್ಲಿ ಅಶ್ವಗಂಧದ ಪ್ರಯೋಜನಗಳನ್ನು ಅರ್ಥಮಾಡಿಕೊಳ್ಳಲು ಹಲವಾರು ಅಧ್ಯಯನಗಳು ನಡೆದಿವೆ. ಕೋವಿಡ್ -19 ರೋಗಿಗಳ ಮೇಲೆ ಅದರ ಪರಿಣಾಮಕಾರಿತ್ವವನ್ನು ಅಧ್ಯಯನ ಮಾಡಲು ಆಯುಷ್ ಸಚಿವಾಲಯವು ಇದೇ ಮೊದಲ ಬಾರಿಗೆ ವಿದೇಶಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಮಹಾಮಾರಿಯ ತವರು ಚೀನಾದಲ್ಲಿ ಡೆಲ್ಟಾ ರೂಪಾಂತರದ ಹಾವಳಿ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.