ದೇಶದಲ್ಲಿ ಕೋವಿಡ್ -19 ಚೇತರಿಕೆ ಪ್ರಮಾಣ ಏರಿಕೆ
ಹೊಸದಿಲ್ಲಿ, ಸೆಪ್ಟೆಂಬರ್15: ದೇಶದಲ್ಲಿ ಕೋವಿಡ್ -19 ಚೇತರಿಕೆ ಪ್ರಮಾಣವು ಶೇಕಡಾ 78.28 ಕ್ಕೆ ಏರಿಕೆಯಾಗಿದೆ. ಒಟ್ಟು 38,59,399 ಜನರು ಚೇತರಿಸಿಕೊಂಡಿರುವುದರಿಂದ ಭಾರತದಲ್ಲಿ ಕೋವಿಡ್ -19 ಚೇತರಿಕೆ ಪ್ರಮಾಣವು ಶೇಕಡಾ 78.28 ಕ್ಕೆ ಏರಿದೆ ಮತ್ತು ಇಲ್ಲಿಯವರೆಗೆ ಕೊರೊನಾವೈರಸ್ ನ ಸಕ್ರಿಯ ಪ್ರಕರಣಗಳು 28,69,338 ಮೀರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಸಕ್ರಿಯ ಪ್ರಕರಣಗಳಲ್ಲಿ ಅರ್ಧದಷ್ಟು (ಶೇಕಡಾ 48.8) ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ಎಂಬ ಮೂರು ರಾಜ್ಯಗಳಲ್ಲಿ ಕೇಂದ್ರೀಕೃತವಾಗಿದೆ. ಉತ್ತರ ಪ್ರದೇಶ, ತಮಿಳುನಾಡು, ಛತ್ತೀಸ್ಗಡ್ , ಒಡಿಶಾ, ಕೇರಳ ಮತ್ತು ತೆಲಂಗಾಣಗಳಲ್ಲಿ ಸಕ್ರಿಯ ಪ್ರಕರಣಗಳು ಶೇಕಡಾ 24.4 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಉತ್ತರ ಪ್ರದೇಶ ಮತ್ತು ತಮಿಳುನಾಡು ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇಕಡಾ 60.35 ರಷ್ಟನ್ನು ನೀಡುತ್ತವೆ ಮತ್ತು ಒಟ್ಟು ಚೇತರಿಸಿಕೊಂಡ ಪ್ರಕರಣಗಳಲ್ಲಿ ಶೇ .60 ರಷ್ಟು ವರದಿ ಮಾಡುತ್ತಿವೆ ಎಂದು ಅದು ಸಚಿವಾಲಯ ತಿಳಿಸಿದೆ.
24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 1,054 ಮಂದಿ ಮೃತಪಟ್ಟ ವರದಿ ದಾಖಲಾಗಿದ್ದು, ಸುಮಾರು 69 ಶೇಕಡಾ ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ದೆಹಲಿಯಲ್ಲಿ ಕೇಂದ್ರೀಕೃತವಾಗಿದೆ.
ದೇಶದಲ್ಲಿ ಇದುವರೆಗೆ ವರದಿಯಾಗಿರುವ ಶೇಕಡಾ 37 ಕ್ಕಿಂತ ಹೆಚ್ಚು ಸಾವುಗಳು ಮಹಾರಾಷ್ಟ್ರದಲ್ಲಿ (29,894 ಸಾವುಗಳು) ಸಂಭವಿಸಿದ್ದು, ಕಳೆದ 24 ಗಂಟೆಗಳಲ್ಲಿ (363 ಸಾವುಗಳು) ಶೇಕಡಾ 34.44 ರಷ್ಟು ಸಾವು ಸಂಭವಿಸಿದೆ ಎಂದು ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 49,30,236 ಕ್ಕೆ ಏರಿಕೆಯಾಗಿದ್ದು, ಒಂದು ದಿನದಲ್ಲಿ 83,809 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.