ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನಾ ಎರಡನೇ ಅಲೆ ಎದುರಿಸುವಲ್ಲಿ ಪ್ರಧಾನಿ ಮೋದಿ ಎಡವಿದ್ದೇಲ್ಲಿ?

Shwetha by Shwetha
April 26, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Covid 19 second wave
Share on FacebookShare on TwitterShare on WhatsappShare on Telegram

ಕೊರೋನಾ ಎರಡನೇ ಅಲೆ ಎದುರಿಸುವಲ್ಲಿ ಪ್ರಧಾನಿ ಮೋದಿ ಎಡವಿದ್ದೇಲ್ಲಿ?

ಸ್ವತಂತ್ರ ಭಾರತವು ಇಲ್ಲಿಯವರೆಗೆ ಇಂದು ಎದುರಿಸುತ್ತಿರುವಂತಹ ಬಿಕ್ಕಟ್ಟನ್ನು ಎದುರಿಸಿರಲಿಲ್ಲ. ದೇಶದಲ್ಲಿ ಅದೆಷ್ಟೋ ಯುದ್ಧಗಳು, ಆಂತರಿಕ ದಂಗೆಗಳು ಮತ್ತು ಸಂಘರ್ಷಗಳು ನಡೆದಿವೆ.‌ ಬಗೆಹರಿಸಲಾಗದ ದೀರ್ಘಕಾಲದ ರಾಜಕೀಯ ಸವಾಲುಗಳು ಮುಂದಿವೆ. ಆದರೆ ಇಂದಿನ ಸಂಕಟದ ಪ್ರಮಾಣವನ್ನು ದೇಶವು ಹಿಂದೆಂದೂ ಕಂಡಿರಲಿಲ್ಲ. ಕಳೆದ ವರ್ಷ ಇತರ ರಾಷ್ಟ್ರಗಳು ಅನುಭವಿಸಿದ ಕೆಟ್ಟ ಪರಿಸ್ಥಿತಿಗೆ ಈ ಬಾರಿ ಭಾರತ ತುತ್ತಾಗಿದೆ.
Covid 19 second wave

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಇಂದು ಭಾರತದಲ್ಲಿ ಪ್ರತಿದಿನ ಲಕ್ಷಾಂತರ ಜನರು ಮಾರಣಾಂತಿಕ ವೈರಸ್‌ನಿಂದ ಬಳಲುತ್ತಿದ್ದಾರೆ. ಈ ಸಮಯದಲ್ಲಿ ಅಗತ್ಯವಿರುವ ಪ್ರತಿಯೊಬ್ಬರಿಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು, ಸಾಧ್ಯವಾದಷ್ಟು ಬೇಗ ಪ್ರತಿಯೊಬ್ಬರಿಗೂ ವ್ಯಾಕ್ಸಿನೇಷನ್ ನೀಡುವುದು, ಕೊರೋನಾ ಪ್ರಸರಣದ ಸರಪಳಿಯನ್ನು ಮುರಿಯಲು ಸೂಕ್ತ ಕಠಿಣ ಕ್ರಮಗಳನ್ನು ಕೈಗೊಳ್ಳುವುದಷ್ಟೇ ಸದ್ಯಕ್ಕಿರುವ ಪರಿಹಾರ.

ಆದರೆ ಇವೆಲ್ಲವುಗಳ ನಡುವೆ ಜನ ಸಾಮಾನ್ಯರ ಮನದಲ್ಲಿ ಮೊದಲನೇ ಕೊರೋನಾ ಅಲೆಯನ್ನು ಎದುರಿಸಲು ಶಕ್ತವಾದ ಕೇಂದ್ರ ಸರ್ಕಾರ ಈ ಬಾರಿ ಏನು ಮಾಡಿದೆ ಎಂಬ ಪ್ರಶ್ನೆ ಮನೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲೂ ಜನರು ಕೇಂದ್ರ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸುವುದನ್ನು ನಾವು ಕಾಣುತ್ತಿದ್ದೇವೆ.

ಮೊದಲನೆಯ ಅಲೆಯ ಸಂದರ್ಭದಲ್ಲಿ ಸರಿಯಾದ ಸಮಯದಲ್ಲಿ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸದೆ ಇರುತ್ತಿದ್ದರೆ ಬಹುಶಃ ಇಂದಿಗಿಂತಲೂ ಕೆಟ್ಟ ಪರಿಸ್ಥಿತಿ ಕಳೆದ ಬಾರಿಯೇ ಎದುರಾಗುತ್ತಿತ್ತೋ ಏನೋ..

ಆದರೂ ಕಳೆದ ಬಾರಿಯ ಧಿಡೀರ್ ಲಾಕ್ ಡೌನ್, ವಲಸಿಗರ ಸಮಸ್ಯೆಗಳು, ಆ ನಂತರದ ಕೃಷಿ ಆಂದೋಲನ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಮೇಲೆ ದೊಡ್ಡ ಹೊಡೆತವನ್ನುಂಟು ಮಾಡುತ್ತದೆ ಎಂದೇ ನಿರೀಕ್ಷಿಸಲಾಗಿತ್ತು. ಇದು ಬಿಹಾರದ ಚುನಾವಣಾ ಫಲಿತಾಂಶದಲ್ಲಿ ಅಥವಾ ಬಂಗಾಳದ ಸಮೀಕ್ಷೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಊಹಿಸಲಾಗಿತ್ತಾದರೂ ಹಾಗೇನು ಆಗಲಿಲ್ಲ.

ಆದರೆ ಕೋವಿಡ್ -19 ರ ಎರಡನೇ ತರಂಗವು ರಾಜಕೀಯ ತಿರುವಿಗೆ ಕಾರಣವಾಗಿದ್ದು, ಜನಸಾಮಾನ್ಯರ ಮನಸ್ಸಿನಲ್ಲಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ರೀತಿಯ ಒಂದು ನಿರ್ಣಾಯಕ ಮತ್ತು ಪರಿವರ್ತಕ ಕ್ಷಣವು ಅನಿವಾರ್ಯವಾಗಿ ರಾಜಕೀಯ ಪರಿಣಾಮಗಳಿಗೆ ಕಾರಣವಾಗಿದೆ.
Covid 19 second wave

ಇಂದು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿನ ಏರಿಕೆಯಿಂದಾಗಿ ನಾವು ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ, ರೆಮ್‌ಡೆಸಿವಿರ್ ಔಷಧಗಳ ಸಮಸ್ಯೆಯನ್ನು ಎದುರಿಸುತ್ತಿದ್ದೇವೆಯೇ ಹೊರತು, ಎಲ್ಲೂ ಪಿಪಿಇ ಕಿಟ್‌, ಮಾಸ್ಕ್ ಹಾಗೂ ವೆಂಟಿಲೇಟರ್‌ ವಿಚಾರದಲ್ಲಿ ಯಾವುದೇ ಕೊರತೆ ಎದುರಾಗಿಲ್ಲ. ಏಕೆಂದರೆ ಕಳೆದ ವರ್ಷದಿಂದ ಇವುಗಳ ಉತ್ಪಾದನೆ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗಿರುವುದೇ ಇದಕ್ಕೆ ‌ಕಾರಣ.

ಹೀಗಿರುವಾಗ ಕೇಂದ್ರ ಸರ್ಕಾರ ಕೊರೋನಾ ಎರಡನೇ ಅಲೆಯಿಂದ ಉಂಟಾದ ವಿಷಮ ಪರಿಸ್ಥಿತಿಯನ್ನು ಎದುರಿಸಲು ಕ್ರಮ ಕೈಗೊಂಡಿಲ್ಲವೇ? ಮೊದಲ ಅಲೆಯ ನಂತರ ಇಂತಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರಗಳಿಗೆ ನೆರವು ‌ನೀಡಿಲ್ಲವೇ?. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಕೇಂದ್ರ ಸರ್ಕಾರ ಕೋವಿಡ್ ಸೋಂಕಿನ ಎರಡನೇ ಅಲೆಯಿಂದ ತಲೆದೋರಿರುವ ಪರಿಸ್ಥಿತಿ ನಿಭಾಯಿಸಲು ಕೈಗೊಂಡ ಕ್ರಮಗಳು :

ದೇಶದ ಪ್ರತಿಯೊಂದು ‌ರಾಜ್ಯಗಳಿಗೆ ಆಮ್ಲಜನಕ(ಆಕ್ಸಿಜನ್) ಮತ್ತು ದ್ರವರೂಪದ ಆಮ್ಲಜನಕ(ಲಿಕ್ವಿಡ್ ಆಕ್ಸಿಜನ್) ಸರಬರಾಜು ಮಾಡುವುದಕ್ಕೆ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲುಗಳನ್ನು ಭಾರತೀಯ ರೈಲ್ವೆ ಪ್ರಾರಂಭಿಸಿದೆ.

ಮೆಡಿಕಲ್ ಆಕ್ಸಿಜನ್ ಅಭಾವ ದೇಶದಲ್ಲಿ ತೀವ್ರವಾಗಿ ತಲೆದೋರಿರುವ ಹಿನ್ನೆಲೆಯಲ್ಲಿ, ಜರ್ಮನಿಯಿಂದ 23 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ವಿಮಾನಗಳ ಮೂಲಕ ಭಾರತಕ್ಕೆ ಏರ್​ಲಿಫ್ಟ್ ಮಾಡುವ ನಿರ್ಧಾರವನ್ನು ಭಾರತದ ರಕ್ಷಣಾ ಸಚಿವಾಲಯ ತೆಗೆದುಕೊಂಡಿದೆ.

ಯುಎಇ, ಸಿಂಗಾಪುರದಿಂದ ಸಹ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಭಾರತಕ್ಕೆ ಏರ್‌ಲಿಫ್ಟ್ ಮಾಡಲಾಗಿದೆ.
ಯುಎಸ್ ನಿಂದ ಸಹ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಭಾರತಕ್ಕೆ ಏರ್‌ಲಿಫ್ಟ್ ಮಾಡಲಾಗುತ್ತಿದೆ.

262 ಆಕ್ಸಿಜನ್‌ ಘಟಕಗಳ ಸ್ಥಾಪನೆ ಮಾಡಲಾಗಿದ್ದು,
ಆಮ್ಲಜನಕವನ್ನು ಆಮದು ಮಾಡಿಕೊಳ್ಳಲು ಸಹ ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನ ಮಂತ್ರಿಗಳ ನಿರ್ದೇಶನದ ಪ್ರಕಾರ, 551 ಮೀಸಲು ಪಿಎಸ್‌ಎ(ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್) ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಪಿಎಂ ಕೇರ್ ಫಂಡ್ ನಿಂದ ಸ್ಥಾಪಿಸಲು ಆದೇಶಿಸಲಾಗಿದೆ.

ದೇಶದ ಪ್ರಮುಖ ಮೆಡಿಕಲ್ ಆಕ್ಸಿಜನ್ ತಯಾರಕರಾದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ, ಜೆಎಸ್​ಡಬ್ಲ್ಯೂ ಕಂಪನಿಯ ಸಜ್ಜನ್ ಜಿಂದಾಲ್, ಜೆಎಸ್​ಪಿಎಲ್​ ಕಂಪನಿಯ ನವೀನ್ ಜಿಂದಾಲ್ ಸೇರಿದಂತೆ ಹಲವು ಪ್ರಮುಖರು ಜೊತೆ ಪ್ರಧಾನ ಮಂತ್ರಿ, ಆಕ್ಸಿಜನ್ ಉತ್ಪಾದನೆ ಹೆಚ್ಚಿಸುವ ಕುರಿತು ಚರ್ಚಿಸಿದ್ದಾರೆ.

ಆಮ್ಲಜನಕ ಕೊರತೆಯ ಹಿನ್ನೆಲೆಯಲ್ಲಿ, ಎಲ್ಲಾ ಕೈಗಾರಿಕೆಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಸರ್ಕಾರ ನಿಲ್ಲಿಸಿದೆ.
Covid 19 second wave

ಕೊರೋನಾ ಚಿಕಿತ್ಸೆಯಲ್ಲಿ ಬಹಳ ಪ್ರಮುಖ ಪಾತ್ರ ವಹಿಸುವ ರೆಮ್‌ಡೆಸಿವಿರ್ ಇಂಜೆಕ್ಷನ್‌ಗಳ ಉತ್ಪಾದನೆ ಹೆಚ್ಚಿಸಿದ್ದು, ಈ ಹಿಂದೆ ಪ್ರತಿ ತಿಂಗಳು 40 ಲಕ್ಷ ಉತ್ಪಾದನೆಯಾಗುತ್ತಿದ್ದ ರೆಮ್‌ಡೆಸಿವಿರ್ ಈಗ ‌ ತೊಂಭತ್ತು ಲಕ್ಷ ಉತ್ಪಾದನೆ ಮಾಡಲಾಗುತ್ತಿದೆ.

ಮೇ 1 ರಿಂದ ಕೊರೋನಾ ವ್ಯಾಕ್ಸಿನೇಷನ್ ನ‌ ಮೂರನೇ ಹಂತ ಪ್ರಾರಂಭವಾಗಲಿದ್ದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹರಾಗಿದ್ದಾರೆ.
ಈಗಾಗಲೇ ಕೊರೋನಾ ವಾರಿಯರ್ಸ್‌ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆಯನ್ನು ನೀಡಲಾಗುತ್ತಿದೆ.

ಬಿಜೆಪಿ ಸರ್ಕಾರವಿರುವ ಹೆಚ್ಚಿನ ರಾಜ್ಯಗಳ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ.

ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಮುಂದಿನ ಎರಡು ತಿಂಗಳುಗಳವರೆಗೆ ಲಕ್ಷಾಂತರ ಬಡವರಿಗೆ‌ ಉಚಿತ ಆಹಾರ ಧಾನ್ಯಗಳನ್ನು ನೀಡಲಿದೆ.

Covid 19 second wave
ಕೊರೋನಾ ಸೋಂಕಿನ ಎರಡನೇ ಅಲೆಯ ಬಗ್ಗೆ ರಾಜ್ಯ ಸರ್ಕಾರಗಳಿಗೆ ಮೊದಲೇ ಎಚ್ಚರಿಸಿದ ಕೇಂದ್ರ ಸರ್ಕಾರ, ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿತ್ತು. ಪರಿಸ್ಥಿತಿಯನ್ನು ಗಮನಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿತ್ತು.

ರಾಜ್ಯ ಸರ್ಕಾರಗಳ ಕೋರಿಕೆಯಂತೆ ಕಳೆದ ವರ್ಷ 162 ಆಕ್ಸಿಜನ್ ಘಟಕಗಳ ಸ್ಥಾಪನೆಗೆ ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಿತ್ತು. ಆದರೆ ರಾಜ್ಯ ಸರ್ಕಾರಗಳು ಇಲ್ಲಿಯವರೆಗೆ ಕೇವಲ 33 ಘಟಕಗಳನ್ನಷ್ಟೇ ಸ್ಥಾಪಿಸಿದೆ.

ಹಾಗಿದ್ದರೆ ಇಂದಿನ ಪರಿಸ್ಥಿತಿಗೆ ಹೊಣೆ ಯಾರು? ಎಲ್ಲವನ್ನೂ ಕೇಂದ್ರ ಸರ್ಕಾರವೇ ಮಾಡಬೇಕು ಎಂದಾದರೆ ರಾಜ್ಯ‌‌ಸರ್ಕಾರಗಳ ಅವಶ್ಯಕತೆಯಾದರೂ ಏನಿದೆ.
ಅನಿರೀಕ್ಷಿತವಾಗಿದ್ದ ಮೊದಲನೆಯ ಅಲೆಯ ಪ್ರತಿಯೊಂದು ಸಂದರ್ಭವನ್ನು ಸಮರ್ಪಕವಾಗಿ ನಿಭಾಯಿಸಿದ ಪ್ರಧಾನಿ ಎರಡನೇ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಪರಿಸ್ಥಿತಿ ನಿಭಾಯಿಸಬಹುದು ಎಂದೆನಿಸಿದ್ದು ತಪ್ಪೇ? ಪ್ರತಿ ಬಾರಿ‌ ಸಂಕಷ್ಟ ಎದುರಾದಾಗ ಸರಿಯಾದ ನಿರ್ಧಾರವನ್ನು ಕೈಗೊಳ್ಳಲಾಗದೆ ಕೇಂದ್ರದೆಡೆ ಮುಖ ಮಾಡುವ ರಾಜ್ಯ‌ ಸರ್ಕಾರಗಳ ಮೇಲೆ ಪ್ರಧಾನಿ ಮೋದಿ ಇಟ್ಟ ನಂಬಿಕೆ ಇಂದಿನ ಕೆಟ್ಟ ‌ಪರಿಸ್ಥಿತಿ‌ಗೆ ಕಾರಣವೇ ?

ಬೇಳೆಕಾಳು ಬೇಯಿಸಿದ ನೀರನ್ನು ಸೇವಿಸುವುದರ ಆರೋಗ್ಯ ಪ್ರಯೋಜನಗಳು#Saakshatv #healthtips #lentilwater https://t.co/ijmWsfs9yV

— Saaksha TV (@SaakshaTv) April 21, 2021

ಈರುಳ್ಳಿ ಉತ್ತಪ್ಪಂ#Saakshatv #cookingrecipe #onionuttappam https://t.co/xZGNnVMyRc

— Saaksha TV (@SaakshaTv) April 21, 2021

ಕಳೆದ ವರ್ಷದಂತೆ ದೇಶದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಾಗಿದೆ – ಏಕೆ ಗೊತ್ತಾ ?#lockdown #coronavirus https://t.co/pEgGhsaq0P

— Saaksha TV (@SaakshaTv) April 25, 2021

ನಿಮ್ಮೊಂದಿಗೆ ನಾವಿದ್ದೇವೆ, ಶೀಘ್ರವಾಗಿ ಚೇತರಿಸಿಕೊಳ್ಳಿ – ಭಾರತಕ್ಕೆ ಆಸ್ಟ್ರೇಲಿಯಾ, ಪಾಕ್, ಫ್ರಾನ್ಸ್ ಸೇರಿದಂತೆ ವಿಶ್ವ ನಾಯಕರ ಹಾರೈಕೆ#getwellsoonindia #wearewithyou https://t.co/h982fC1bBp

— Saaksha TV (@SaakshaTv) April 25, 2021

#Covid19 #secondwave

Tags: Covid-19 second wave
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram