ಬೀದರ್ : 6ನೇ ದಿನದ ಲಾಕ್ ಡೌನ್ – ಪೊಲೀಸರಿಂದ ನಿರಂತರ ವಾಹನಗಳ ತಪಾಸಣೆ
ಬೀದರ್ : ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ರಾಜ್ಯಾದ್ಯಂತ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ.. ಅಗತ್ಯ ವಸ್ತುಗಳು ಸೇವೆಗಷ್ಟೇ ಅವಕಾಶ ನೀಡಲಾಗಿದೆ… ವಾಹನಗಳು ಸುಖಾಸುಉಮ್ಮನೆ ರಸ್ತೆಗಿಳಿಯಂತೆ ಎಚ್ಚರಿಕೆ ನೀಡಲಾಗಿದೆ.. ಈ ನಡುವೆ ಗಡಿ ಜಿಲ್ಲೆ ಬೀದರ್ ನಲ್ಲಿ ಲಾಕ್ ಡೌನ್ ನ 6ನೇ ದಿನವೂ ಪೊಲೀಸರು ನಿರಂತರ ಎಲ್ಲಾ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ಸಾಲು ಸಲು ಹಬ್ಬಗಳನ್ನು ಬಂದ ಪ್ರಯುಕ್ತ ಹೆಚ್ಚಿದ ಜನರ ಸಂಚಾರ ಆರಂಭವಾಗಿದೆ.. ಹೀಗಾಗಿ ತಪಾಸಣೆ ಕಾರ್ಯವೂ ಬಿರುಸಿನಿಂದ ನಡೆಯುತ್ತಿದ್ದು, ಪೊಲೀಸರು ಮಾಸ್ಕ್ ಹಾಕದವರಿಗೆ, ಹಾಗು ಅನಗತ್ಯ ಒಡಾಡುವವರಿಗೆ ದಂಡ ವಿಧಿಸುತ್ತಿದ್ದು, ಅನೇಕ ವಾಹನಗಳನ್ನ ಈಗಾಗಲೇ ಸೀಜ್ ಮಾಡಿದ್ಧಾರೆ.
ಗುಂಪಾ ರಿಂಗ ರಸ್ತೆಯಲ್ಲಿ ವ್ಯಾಪಾರಿಗಳಿಗೂ ಹಾಗೂ ವರ್ತಕರಿಗೂ ಜನಜಂಗುಳಿ ಸೇರದಂತೆ ಪೊಲೀಸರು ಸುಚಿಸಿದ್ದಾರೆ. ನಿಗದಿ ಮಾಡಿರುವ ಸರಿಯಾದ ಸಮಯಕ್ಕೆ ಅಂಗಡಿ ಮುಂಗಟ್ಟು ಬಂದ್ ಮಾಡಲು ಖಡಕ್ ಆಗಿ ವಾರ್ನಿಂಗ್ ಸಹ ಕೊಟ್ಟಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.