ಕೊರೊನಾ ನಿಯಮ ಉಲ್ಲಂಘನೆ : ಡಿ.ಕೆ.ಶಿವಕುಮಾರ್ ಗೆ ದಂಡ dk-shivakumar
ಹುಬ್ಬಳ್ಳಿ : ಲಾಕ್ ಡೌನ್ ಸಮಯದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಆರೋದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ರೂ. ದಂಡ ವಿಧಿಸಿದೆ.
ಮೇ 31ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್ ಇತ್ಯಾದಿ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು. ಇದರಿಂದಾಗಿ ಜನಜಂಗುಳಿ ವಾತಾವರಣ ನಿರ್ಮಾಣವಾಗಿತ್ತು.
ಅಲ್ಲದೇ ಸಾಮಾಜಿಕ ಅಂತರಯನ್ನು ಗಾಳಿಗೆ ತೂರಲಾಗಿತ್ತು. ಈ ಹಿನ್ನೆಲೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ಸ್ ಹಾಕಿದ ಆರೋಪದ ಮೇಲೆ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.