‘ಕೋವಿಡ್ 2ನೇ ಅಲೆ – ದೇಶಾದ್ಯಂತ ಎಷ್ಟು ಮಕ್ಕಳು ಪೋಷಕರನ್ನ ಕಳೆದುಕೊಂಡಿದ್ದಾರೆ – ಊಹಿಸುವುದೂ ಅಸಾಧ್ಯ’
ಬೀದಿ ಬದಿ ಹಸಿವಿನಿಂದ ಬಳಲುತ್ತಿರುವ ಮಕ್ಕಳ ಸಂಕಟ ಅರ್ಥ ಮಾಡಿಕೊಳ್ಳಿ – ಸುಪ್ರೀಂ ಕೋರ್ಟ್
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ..
ಈ ನಡುವೆ ದೇಶದಲ್ಲಿ ಕೊರೊನಾದಿಂದ ಎಷ್ಟು ಮಕ್ಕಳು ತಂದೆ ತಾಯಿಯರನ್ನ ಕಳೆದುಕೊಂಡು ಅನಾಥರಾಗಿದ್ದಾರೆ ಎಂಬ ಬಗ್ಗೆ ಆಘತಕಾರಿ ಮಾಹಿತಿ ಲಭಿಸಿದೆ. ಕೊರೊನಾದಿಂದ ಎಷ್ಟು ಮಕ್ಕಳು ಅನಾಥರಾಗಿದ್ದಾರೆ ಎಂಬುದನ್ನೂ ಊಹಿಸಿಕೊಳ್ಳುವುದೂ ಅಸಾಧ್ಯ.. ಅಂತಹ ಮಕ್ಕಳಿಗೆ ರಾಜ್ಯ ಸರ್ಕಾರಗಳು ನೆರವಾಗಬೇಕು, ಪರಿಹಾರ ಒದಗಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಮಕ್ಕಳ ಸಂಕಟವನ್ನು ಅರ್ಥಮಾಡಿಕೊಳ್ಳಬೇಕು.. ನ್ಯಾಯಾಲಯಗಳಿಂದ ಹೆಚ್ಚಿನ ಆದೇಶಕ್ಕಾಗಿ ಕಾಯದೇ ತಕ್ಷಣವೇ ಮಕ್ಕಳಿಗೆ ನೆರವಾಗಬೇಕೆಂದು ನ್ಯಾಯಾಲಯವು ನಿರ್ದೇಶನ ನೀಡಿದೆ. ಕೊರೊನಾ ಕಾರಣದಿಂದಾಗಿ ಅನಾಥ ಮಕ್ಕಳ ಗುರುತಿಸಲು ಮತ್ತು ರಾಜ್ಯ ಸರ್ಕಾರಗಳಿಗೆ ತಕ್ಷಣ ಪರಿಹಾರವನ್ನ ನೀಡುವಂತೆ ಕೋರಿ ಅಮಿಕಸ್ ಕ್ಯೂರಿ ಗೌರವ್ ಅಗರ್ ವಾಲ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಂತರ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ.
ಇನ್ನೂ ಮಹಾಮಾರಿ ಕೊರೊನಾದಿಂದಾಗಿ ಮಹಾರಾಷ್ಟ್ರ ಒಂದರಲ್ಲೇ 2,900ಕ್ಕೂ ಹೆಚ್ಚು ಮಕ್ಕಳು ತಮ್ಮ ಪೋಷಕರನ್ನ ಕಳೆದುಕೊಂಡಿದ್ದಾರೆ ಎಂಬ ಅಂಶ ನಮ್ಮ ಗಮನಕ್ಕೆ ಬಂದಿದೆ.. ಹಾಗಾದ್ರೆ ದೇಶದಲ್ಲಿ ಇಂತಹ ಎಷ್ಟು ಮಕ್ಕಳು ಇದ್ದಾರೆಂದು ಊಹೆ ಮಾಡಿಕೊಳ್ಳುವುದೂ ಅಸಾಧ್ಯ ಎಂಬ ಅಫಿಪ್ರಾಯವನ್ನ ನ್ಯಾಯಾಲಯವು ವ್ಯಕ್ತಪಡಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.