ಕೊರೊನಾ ಮಹಾಮಾರಿಯ ಭಯವೇ ಇಲ್ವಾ… ಬೇಕಾಬಿಟ್ಟಿ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ಹಬ್ಬದ ಶಾಪಿಂಗ್
ರಾಯಚೂರು : ರಾಜ್ಯದಲ್ಲಿ ಕೊರೊನಾದಿಂದ ದಿನೇ ದಿನೇ ಸಾವಿನ ಸಂಖ್ಯೆ , ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ.. ಬೆಡ್ ಕೊರತೆ ಆಕ್ಸಿಜನ್ ಕೊರತೆ ಎದುರಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಸರರ್ಕಾರ ಲಾಕ್ ಡೌನ್ ಜಾರಿ ಮಾಡಿದೆ.. ಆದ್ರೆ ಜನರು ತಮ್ಮ ಜೀವದ ಬಗ್ಗೆಯೇ ನಿರ್ಲಕ್ಷ್ಯ ತೀರುತ್ತಿದ್ದರೆ.. ಬೇಕಾಬಿಟ್ಟಿ ರಸ್ತೆಗಿಳಿಯುತ್ತಾ ಸರ್ಕಾರದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ.
ರಂಜಾನ್ ಹಬ್ಬದ ಹಿನ್ನೆಲೆ ರಾಯಚೂರು ಪಟ್ಟಣದಲ್ಲಿ ಅಗತ್ಯವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದ ದೃಶ್ಯ ಕಂಡುಬಂದಿದೆ.. ಸಾಮಾಜಿಕ ಅಂತರವಂತೂ ದೂರದ ಮಾತು ಬಹುತೇಕರು ಮಾಸ್ಕ್ ಗಳನ್ನ ನಾಮಕಾವಸ್ಥೆಗೆ ಕುತ್ತಿಗೆಗೆ ಗಲ್ಲದ ವರೆಗೂ ನೇತುಹಾಕಿಕೊಂಡು ಶಾಪಿಂಗ್ ಮಾಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.