ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಲಸಿಕೆ ಪಡೆದರೆ ಏನಾಗುತ್ತೆ..? ಅಧ್ಯಯದಿಂದ ಹೊಸ ಅಂಶ ಬಹಿರಂಗ..!
ನವದೆಹಲಿ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಮತ್ತೊಂದೆಡೆ ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ.. ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲಿದ್ದಾರೆ.. ಜೊತೆಗೆ ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಲಸಿಕೆಯ ಚರ್ಚೆಯೂ ಜೋರಾಗಿರೋವಾಗ್ಲೇ ಈ ಕುರಿತಾಗಿ ಅಧ್ಯಯನದಿಂದ ಸಮಾಧಾನಕರ ಅಂಶ ಬಹಿರಂಗವಾಗಿದೆ.. ಹೌದು.. ಮೇಡ್ ಇನ್ ಇಂಡಿಯಾದೇ ಲಸಿಕೆಗಳಾಗಿರುವ ಕೋವಿಶೀಲ್ಡ್ ನ ಒಂದು ಡೋಸ್ ಹಾಗೂ ಇನ್ನೊಂದು ಡೋಸ್ ಕೋವ್ಯಾಕ್ಸಿನ್ ಲಸಿಕೆ ನೀಡುವುದರಿಂದ ಕೊರೋನಾದ ವಿರುದ್ಧ ದೇಹದಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಸೃಷ್ಟಿಯಾಗುತ್ತದೆ ಎಂದು ಭಾರತದಲ್ಲಿ ನಡೆದ ಮೊದಲ ಅಧಿಕೃತ ಅಧ್ಯಯನದಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನ ನಡೆಸಿದೆ.
ಉತ್ತರ ಪ್ರದೇಶದ ಒಟ್ಟು 98 ಜನರ ಮೇಲೆ ಈ ಪ್ರಯೋಗ ನಡೆಸಲಾಗಿದ್ದು, ಇವರಲ್ಲಿ ಅಚಾತುರ್ಯದಿಂದ ಮೊದಲ ಡೋಸ್ ಕೋವಿಶೀಲ್ಡ್ ಹಾಗೂ ಎರಡನೇ ಡೋಸ್ ಕೋವ್ಯಾಕ್ಸಿನ್ ಪಡೆದ 18 ಜನರು ಸೇರಿದ್ದಾರೆ. ಇನ್ನುಳಿದ 80 ಜನರಲ್ಲಿ 40 ಜನರಿಗೆ ಮೊದಲ ಡೋಸ್ ಕೋವಿಶೀಲ್ಡ್ ಹಾಗೂ ಎರಡನೇ ಡೋಸ್ ಕೋವ್ಯಾಕ್ಸಿನ್ ನೀಡಲಾಗಿತ್ತು. ಇತರ 40 ಜನರಿಗೆ ಎರಡೂ ಡೋಸ್ ಒಂದೇ ಲಸಿಕೆ ನೀಡಲಾಗಿತ್ತು. ಎರಡು ಡೋಸ್ ಪಡೆದ ನಿರ್ದಿಷ್ಟ ಸಮಯದ ನಂತರ ಪರೀಕ್ಷೆ ನಡೆಸಿದಾಗ ಬೆರಕೆ ಲಸಿಕೆ ಪಡೆದವರಲ್ಲಿ ಒಂದೇ ಲಸಿಕೆಯ ಎರಡು ಡೋಸ್ ಪಡೆದವರಿಗಿಂತ ಹೆಚ್ಚು ರೋಗನಿರೋಧಕ ಶಕ್ತಿ ಕಂಡುಬಂದಿದೆ ಎಂದು ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ.
ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳ ತಂತ್ರಜ್ಞಾನ ಬೇರೆಬೇರೆಯಾಗಿದೆ. ಒಂದು ಅಡೆನೋವೈರಸ್ ಲಸಿಕೆಯಾಗಿದ್ದರೆ, ಇನ್ನೊಂದು ಮೃತ ವೈರಸ್ಗಳನ್ನು ಬಳಸಿ ತಯಾರಿಸಿದ ಲಸಿಕೆಯಾಗಿದೆ. ಆದರೂ ಈ ಎರಡು ಲಸಿಕೆಗಳ ತಲಾ ಒಂದೊಂದು ಡೋಸ್ ಪಡೆಯುವುದರಿಂದ ಯಾವುದೇ ಹೆಚ್ಚಿನ ಅಡ್ಡಪರಿಣಾಮ ಉಂಟಾಗುವುದಿಲ್ಲ. ಈ ಲಸಿಕೆಗಳ ಮಿಶ್ರಣ ಸುರಕ್ಷಿತ. ಒಂದೇ ಲಸಿಕೆಯ ಎರಡು ಡೋಸ್ ಪಡೆದಾಗ ಯಾವ ರೀತಿಯ ಅಡ್ಡಪರಿಣಾಮಗಳು ಕಂಡುಬಂದಿವೆಯೋ ಅಂತಹವೇ ಅಡ್ಡಪರಿಣಾಮಗಳು ಮಿಶ್ರ ಲಸಿಕೆ ಪಡೆದಾಗಲೂ ಕಂಡುಬಂದಿವೆ ಎಂದು ವರದಿ ಹೇಳಿದೆ. ದೇಶದಲ್ಲಿ ಲಸಿಕಾ ಅಭಿಯಾನ ವೇಗವಾಗಿ ನಡೆಯುತ್ತಿರುವಾಗ ಅಚಾತುರ್ಯದಿಂದ ಎರಡು ಜಾತಿಯ ಲಸಿಕೆಗಳ ಬೆರಕೆಯಾದರೆ ಜನರಿಗೆ ಉಂಟಾಗಬಹುದಾದ ಆತಂಕದ ಹಿನ್ನೆಲೆಯಲ್ಲಿ ಈ ಅಧ್ಯಯನ ನಡೆಸಿರುವುದಾಗಿ ಐಸಿಎಂಆರ್ ಹೇಳಿಕೊಂಡಿದೆ.
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








