ಇನ್ಮುಂದೆ ಪಡಿತರಕ್ಕೆ ಬೆರಳಚ್ಚು ಕಡ್ಡಾಯವಲ್ಲ – ಕಾರಣವೇನು ಗೊತ್ತಾ..?
ಬೆಂಗಳೂರು: ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸರ್ಕಾರ ನಾನಾ ಕ್ರಮಗಳನ್ನ ಕೈಗೊಂಡಿದ್ದು, ಲಾಕ್ ಡೌನ್ ಕೂಡ ಜಾರಿ ಮಾಡಿದೆ.. ಆದ್ರೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ಜೊತೆಗೆ ಪಡಿತರ ವಿತರಣೆಗೂ ಯಾವುದೇ ಅಡಚಣೆ ಇಲ್ಲ.
ಆದ್ರೆ ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯಾಗಿತ್ತು.. ಬೆರಳಚ್ಚು ನೀಡುವುದು , ಪಡೆದುಕೊಳ್ಳುವುದು , ಈ ಪ್ರಕ್ರಿಯೆ ನಡುವೆ ಪಡಿತರ ಚೀಟಿದಾರರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೋಂಕು ತಗುಲಬಹುದಾದ ಸಾಧ್ಯತೆಗಳಿರುತ್ತೆ,.. ಹೀಗಾಗಿ ಜನರ ಆರೋಗ್ಯ ರಕಣೆಯ ದೃಷ್ಟಿಯಿಂದ ಮೇ ತಿಂಗಳ ಪಡಿತರವನ್ನು ಬೆರಳಚ್ಚು ಪಡೆಯದೆ ವಿತರಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಆದೇಶ ಹೊರಡಿಸಿದೆ.
ಮೇ ತಿಂಗಳಲ್ಲಿ ಪಡಿತರ ವಿತರಣೆಗೆ ಸಂಬಂಧಪಟ್ಟಂತೆ ಕೆಲ ಪರ್ಯಾಯ ಅವಕಾಶಗಳನ್ನುನೀಡಿದೆ. ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯೊಂದಿಗೆ ಜೋಡಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಪಡೆದ ಓಟಿಪಿ ನೀಡಿ ಪಡಿತರ ಪಡೆಯಬಹುದು.
ವಯೋವೃದ್ಧರು, ಅನಾರೋಗ್ಯಪೀಡಿತರು, ವಿಕಲಚೇತನರಿಗೆ ವಿನಾಯ್ತಿ ಸೌಲಭ್ಯದಡಿ ಪಡಿತರ ವಿತರಿಸಲಾಗುತ್ತದೆ. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ, ಕೈಬರಹಬಿಲ್ ಮೂಲಕವೂ ನೇರವಾಗಿ ಪಡಿತರ ವಿತರಿಸಲಾಗುತ್ತದೆ. ಪಡಿತರ ಪಡೆಯಲು ರಾಜ್ಯ ಹಾಗೂ ಹೊರರಾಜ್ಯದಪಡಿತರ ಚೀಟಿದಾರರಿಗೆ ಪೋರ್ಟೆಬಿಲಿಟಿ ಸೌಲಭ್ಯದಮೂಲಕ ಪಡಿತರ ವಿತರಿಸಲಾಗುತ್ತದೆ ಎಂದು ಇಲಾಖೆಆಯುಕರಾ¤ ದ ಡಾ.ಶಮ್ಲಾ ಇಕ್ಬಾಲ್ ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.