‘ರೂಪಾಂತರ ಕೊರೊನಾ ವೈರಸ್ ಮೇಲೂ ಕೋವಿಡ್ ಲಸಿಕೆ ಪರಿಣಾಮಕಾರಿ’
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಬಾರತದಲ್ಲಿ ರೂಪಾಂತರ ಕೊರೊನಾ ವೈರಸ್ ನ ಹಾವಳಿಯೂ ಹೆಚ್ಚಾಗಿಯೇ ಇದೆ.. ಮತ್ತೊಂದೆಡೆ ಕೊರೊನಾ ತಡೆಗೆ ದೇಶದಲ್ಲಿ ಲಸಿಕೆ ಅಭಿಯಾನ ಜಾರಿಯಲ್ಲಿದೆ.. ಈ ನಡುವೆ ಅಧ್ಯಯನವೊಂದು ಲಸಿಕೆಯ ಬಗ್ಗೆ ಸಮಾಧಾನಕರ ಸಂಗತಿಯೊಂದನ್ನ ಬಹಿರಂಗಪಡಿಸಿದೆ.
ಲಸಿಕೆಗಳು ಸೋಂಕು ತೀವ್ರ ಸ್ವರೂಪಕ್ಕೆ ಹೋಗದಂತೆ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಖಾಸಗಿ ಆರೋಗ್ಯ ಸಂಸ್ಥೆಯ ಅಧ್ಯಯನ ತಿಳಿಸಿದೆ. ಜೊತೆಗೆ ಲಸಿಕೆಗಳಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವೂ ಕಡಿಮೆ ಆಗಲಿದ್ದು, ಸಾವಿನ ಸಂಖ್ಯೆಯೂ ಗಣನೀಯವಾಗಿ ಇಳಿಮುಖವಾಗಲಿದೆ ಎನ್ನಲಾಗಿದೆ.
ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆ ಈ ಅಧ್ಯಯನ ನಡೆಸಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುವ, ಸೋಂಕಿನ ಲಕ್ಷಣವಿದ್ದ 69 ಆರೋಗ್ಯ ಕಾರ್ಯಕರ್ತರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದೆ. ಅಷ್ಟೇ ಅಲ್ಲ ಈ ಲಸಿಕೆಗಳ ರೂಪಾಂತರ ಕೊರೊನಾ ಸೋಂಕಿನ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಲಿದೆ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.