ಲ್ಯಾಟಿನ್ ಅಮೆರಿಕ ಹೊರತುಪಡಿಸಿ ವಿಶ್ವದೆಲ್ಲೆಡೆ ಮತ್ತೆ ವೇಗ ಪಡೆದ ಕೋವಿಡ್
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ. ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ಲ್ಯಾಟಿನ್ ಅಮೆರಿಕವನ್ನು ಹೊರತುಪಡಿಸಿ ವಿಶ್ವದ ಎಲ್ಲಾ ಪ್ರದೇಶಗಳಲ್ಲಿ ಕೋವಿಡ್ ಈ ವಾರ ಮತ್ತೆ ವೇಗ ಪಡೆದುಕೊಂಡಿದೆ ಎಂದು ಹೇಳಲಾಗ್ತಿದೆ ಕಳೆದ ವಾರ ಜಾಗತಿಕವಾಗಿ 3,77,000 ಕೋವಿಡ್ -19 ಪ್ರಕರಣಗಳು ವರದಿಯಾಗುವ ಮೂಲಕ ಏರಿಕೆಯ ಸೂಚನೆ ಲಭ್ಯವಾಗಿದ್ದು, ಏರಿಕೆ ಪ್ರಮಾಣ ಶೇ 2ರಷ್ಟಿದೆ ಎಂದು ಎಎಫ್ಪಿಯ ದತ್ತಾಂಶಗಳು ತಿಳಿಸುತ್ತಿವೆ. ಕಳೆದ ಏಪ್ರಿಲ್ ತಿಂಗಳಲ್ಲಿ ಅತ್ಯಧಿಕ ಪ್ರಕರಣ ( 816,800) ಹೊಸ ದೈನಂದಿನ ಪ್ರಕರಣಗಳು ವರದಿಯಾಗಿದ್ದವು. ನಂತರ ಇಳಿಕೆಯಾಗುತ್ತಿದೆ ಎಂದುಕೊಂಡಾಗಲೇ ಮತ್ತೊಮ್ಮೆ ಏರಿಕೆಯಾಗಲು ಆರಂಭಿಸಿದೆ. ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್ನಲ್ಲಿ ಮಾತ್ರ ಈ ವಾರ ಸುಧಾರಣೆ ಕಂಡಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ವಾರ ಶೇ 13 ಕಡಿಮೆ ಪ್ರಕರಣಗಳು ವರದಿಯಾಗಿವೆ.
ಆಕ್ಲಾಂಡ್ ನ ಮೃಗಾಲಯದಲ್ಲಿ ಪ್ರಾಣಿಗಳಿಗೆ ಕೋವಿಡ್ ಲಸಿಕೆ
ಸಾಂಕ್ರಾಮಿಕ ರೋಗವು ವಿಶ್ವದ ಇತರ ಕಡೆಗಳಲ್ಲಿ ಮತ್ತೆ ಏರಿದೆ. ಯುರೋಪಿನಲ್ಲಿ ಶೇ.30ರಷ್ಟು, ಆಫ್ರಿಕಾದಲ್ಲಿ ಶೇ 25ರಷ್ಟು, ಮಧ್ಯಪ್ರಾಚ್ಯದಲ್ಲಿ ಶೇ 10ರಷ್ಟು, ಅಮೆರಿಕ ಮತ್ತು ಕೆನಡಾದಲ್ಲಿ ಶೇ 5ರಷ್ಟು, ಏಷ್ಯಾದಲ್ಲಿ ಶೇ4ರಷ್ಟು ಏರಿಕೆ ಕಂಡು ಬಂದಿದೆ. ಓಶಿಯಾನಿಯಾ ದೇಶಗಳಲ್ಲಿ ಪ್ರಕರಣಗಳ ಸಂಖ್ಯೆ ಶೇ 31ರಷ್ಟು ಅಧಿಕವಾಗಿದೆ.
ಮ್ಯಾನ್ಮಾರ್ನಲ್ಲಿ ಶೇ 119ರಷ್ಟು ಹೆಚ್ಚು ಪ್ರಕರಣಗಳು ವರದಿಯಾಗಿವೆ. ಸ್ಪೇನ್ ಶೇ 80, ಬ್ರಿಟನ್ನಲ್ಲಿ 71, ಟುನೀಶಿಯಾದಲ್ಲಿ ಶೇ 69, ಕ್ಯೂಬಾದಲ್ಲಿ ಶೇ 68 ರಷ್ಟು ಹೆಚ್ಚು ಈ ವಾರ ವರದಿಯಾಗಿವೆ.
ಇನ್ನೂ ಬ್ರೆಜಿಲ್ನಲ್ಲಿ ಕಳೆದ ವಾರ ದಿನದಲ್ಲಿ 54,100 ಪ್ರಕರಣಗಳು ವರದಿಯಾಗಿವೆ. ನಂತರದ ಸ್ಥಾನದಲ್ಲಿ ಭಾರತವಿದ್ದು, 47,000 ಪ್ರಕರಣಗಳನ್ನು ಪತ್ತೆಯಾಗಿದೆ. ಕೊಲಂಬಿಯಾದಲ್ಲಿ 29,900 ಪ್ರಕರಣಗಳು ದಾಖಲಾಗಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.