ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಅಟ್ಟಹಾಸ – ನಾಲ್ಕನೇ ಅಲೆ ಸೃಷ್ಟಿ – WHO
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ನಡುವೆ WHO ಮತ್ತೊಂದು ಆತಂಕಕಾರಿ ಮಾಹಿತಿಯನ್ನ ಹೊರಗೆಡವಿದೆ.. ಮಧ್ಯಪ್ರಾಚ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಏಕಾಏಕಿ ಏರಿಕೆಗೆ ಕಾರಣವಾಗಿರುವ ಡೆಲ್ಟಾ ರೂಪಾಂತರವು, ಸೋಂಕಿನ 4ನೇ ಅಲೆ ಸೃಷ್ಟಿಸಲಿದೆ ಎಂದು ಎಚ್ಚರಿಸಿದೆ.
ಮಧ್ಯಪ್ರಾಚ್ಯದ ದೇಶಗಳಲ್ಲಿ ಕೋವಿಡ್-19 ಸೋಂಕು ಮತ್ತು ಮರಣ ಪ್ರಕರಣಗಳ ಏರಿಕೆಗೆ ಡೆಲ್ಟಾ ಹರಡುವಿಕೆಯು ಕಾರಣವಾಗಿದೆ. ಈ ಭಾಗದ 22 ರಾಷ್ಟ್ರಗಳ ಪೈಕಿ 15 ರಾಷ್ಟ್ರಗಳಲ್ಲಿ ಆತಂಕ ಹೆಚ್ಚಾಗಿದೆ ಎಂದು WHO ತಿಳಿಸಿದೆ. ಈ ಭಾಗದಲ್ಲಿ ಡೆಲ್ಟಾ ಪ್ರಬಲ ತಳಿಯಾಗಿ ಕಾಣಿಸಿಕೊಂಡಿದ್ದು, ಲಸಿಕೆ ಹಾಕಿಸಿಕೊಳ್ಳದವರಲ್ಲಿ ಹೆಚ್ಚಾಗಿ ಸೋಂಕು ದೃಢಪಟ್ಟಿರುವುದು ದಾಖಲಾಗಿದೆ.ಡೆಲ್ಟಾ ರೂಪಾಂತರ ತಳಿಯು ಮೂಲ ಕೊರೊನಾ ವೈರಸ್ಗಿಂತ ವೇಗವಾಗಿ ಹರಡುತ್ತಿರುವುದು ಕಳವಳಕಾರಿಯಾಗಿದೆ ಎಂದೂ ಹೇಳಿದೆ.
ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವುದು ಆತಂಕಕಾರಿ. ಹೊಸ ಸೋಂಕು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಇತ್ತೀಚಿನ ವಾರಗಳಲ್ಲಿ ಹೆಚ್ಚಾಗಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರಲ್ಲಿ ಹೆಚ್ಚಿನ ಸೋಂಕಿತರು ಇನ್ನೂ ಲಸಿಕೆ ಪಡೆದುಕೊಳ್ಳದೆ ಇರುವರೇ ಆಗಿದ್ದಾರೆ. ಇದೀಗ ನಾವು ಈ ಭಾಗದಲ್ಲಿ ಕೋವಿಡ್ 4ನೇ ಅಲೆಯನ್ನು ಎದುರಿಸುತ್ತಿದ್ದೇವೆ ಎಂದು WHO ಪೂರ್ವ ಮೆಡಿಟರೇನಿಯನ್ ಪ್ರಾದೇಶಿಕ ನಿರ್ದೇಶಕ ತಿಳಿಸಿದ್ದಾರೆ.
“ಬಲವಂತವಾಗಿ ಕಿಸ್ ಮಾಡಲು ಬಂದ್ರು, ಹೆದರಿ ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದೆ” – ಕುಂದ್ರಾ ವಿರುದ್ಧ ಶರ್ಲಿನ್ ಆರೋಪ
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.