ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆಗೆ ಬಾಬಾ ರಾಮದೇವ್ ಒತ್ತಾಯ..!
ಆಂಧ್ರಪ್ರದೇಶ : ಯೋಗ ಗುರು, ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಅವರು ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಲು ಒತ್ತಾಯಿಸಿದ್ದಾರೆ. ಆಂಧ್ರ ಪ್ರದೇಶದ ತಿರುಪತಿಯಲ್ಲಿ ಟಿಟಿಡಿ ವತಿಯಿಂದ ಆಯೋಜಿಸಲಾಗಿದ್ದ “ಗೋ ಮಹಾ ಸಮ್ಮೇಳನ”ದಲ್ಲಿ ರಾಮದೇವ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಮಸೂದೆಯನ್ನು ತರಲಿ ಎಂದು ಒತ್ತಾಯಿಸಿದರು. ಅಲ್ಲದೇ ಪತಂಜಲಿ ಪೀಠವು ಈಗಾಗಲೇ ಗೋ ಸಂರಕ್ಷಣಾ ಅಭಿಯಾನವನ್ನು ಆರಂಭಿಸಿದೆ. ಗೋವು ಮಹಾ ಸಮ್ಮೇಳನದ ನಿರ್ಣಯಗಳು ಎಲ್ಲ ಗೋ ಪ್ರೇಮಿಗಳಲ್ಲಿ ಪ್ರತಿಧ್ವನಿಸುತ್ತಿದೆ ಎಂದಿದ್ದಾರೆ.