ಬ್ಯಾಂಕ್ ಮ್ಯಾನೇಜರ್ ಹಾಗೂ ಬ್ಯಾಂಕ್ ಸಹಾಯಕ ಸೇರಿಕೊಂಡು ಗ್ರಾಹಕರ ಖಾತೆಯಿಂದ ಸುಮಾರು 1.89 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎನ್ನಲಾಗಿದೆ.
ಬ್ಯಾಂಕ್ ಮ್ಯಾನೇಜರ್ ಗಣೇಶ್ ಬಾಬು ಮತ್ತು ಜಿತೇಂದ್ರ ಕುಮಾರ್ ಚನ್ನರಾಯಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಇವರಿಬ್ಬರು ಸೇರಿಕೊಂಡು ಜೂನ್ 3 ರಿಂದ ಜುಲೈ 17 ರ ನಡುವೆ ಆರ್ಟಿಜಿಎಸ್ ವಹಿವಾಟಿನ ಮೂಲಕ ಹಲವಾರು ಖಾತೆಗಳಿಂದ 1,88,75,000 ರೂ.ಗಳನ್ನು ಇತರ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಹೀಗಾಗಿ ಸಂತ್ರಸ್ತರಾದ ರಾಮಕ್ಕ, ಪಾಪಮ್ಮ, ಚೈತ್ರಾ ಯಾದವ್, ಕಿಶೋರ್ ಮತ್ತು ವೆಂಕಟಪ್ಪ ಅವರ ಖಾತೆಯಿಂದ ಹಣ ವರ್ಗಾವಣೆಗೊಂಡಿದೆ. ಹಣ ವರ್ಗಾವಣೆಗೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಅವರು ಬ್ಯಾಂಕ್ಗೆ ಧಾವಿಸಿ ಆಕ್ರೋಶಗೊಂಡ ಮೇಲೆ ಈ ಸಂಗತಿ ಬಯಲಿಗೆ ಬಂದಿದೆ.
ಸದ್ಯ ಇಬ್ಬರನ್ನೂ ಕೆಲಸದಿಂದ ಅಮಾನತು ಮಾಡಲಾಗಿದ್ದು, ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.