ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Cricket: ಕೆಎಸ್‌ಸಿಎ ಟೂರ್ನಿಯಲ್ಲಿ ಬೆಂಗಳೂರಿನ ಕಿರಿಯ ಕ್ರಿಕೆಟಿಗನ ಬ್ಯಾಟಿಂಗ್‌ ಅಬ್ಬರ

1400ಕ್ಕೂ ಹೆಚ್ಚು ರನ್‌ಗಳಿಸಿ ಗಮನ ಸೆಳೆದಿರುವ ನಿತೀಶ್‌ ಆರ್ಯ

C Dinesh by C Dinesh
November 25, 2023
in Sports, ಕ್ರಿಕೆಟ್
Nitish Arya

Nitish Arya

Share on FacebookShare on TwitterShare on WhatsappShare on Telegram

ಕರ್ನಾಟಕ ಕ್ರಿಕೆಟ್‌ ವಲಯದಲ್ಲಿ ಕಿರಿಯ ಆಟಗಾರನೊಬ್ಬ ತನ್ನ ಅದ್ಭುತ ಬ್ಯಾಟಿಂಗ್‌ನಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ನಡೆಸಿರುವ 2023-24ರ ಆವೃತ್ತಿಯ ವಿವಿಧ ಪಂದ್ಯಾವಳಿಗಳಲ್ಲಿ 1400 ರನ್‌ಗಳನ್ನ ಕಲೆಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಬೆಂಗಳೂರು ಮೂಲದ 13 ವರ್ಷದ ಕಿರಿಯ ಕ್ರಿಕೆಟರ್‌ ನಿತೀಶ್ ಆರ್ಯ, ಸದ್ಯ ಕರ್ನಾಟಕ ಕ್ರಿಕೆಟ್ ವಲಯದ ಸೆನ್ಸೇಷನ್‌ ಆಗಿದ್ದಾರೆ. ಬಲಗೈ ಆರಂಭಿಕ ಬ್ಯಾಟರ್‌ ಆಗಿರುವ ನಿತೀನ್‌ ಆರ್ಯ, ರಾಜಾಜಿನಗರ ಕ್ರಿಕೆಟರ್ಸ್ ಮತ್ತು ತಾನು ವ್ಯಾಸಂಗ ಮಾಡುತ್ತಿರುವ ಮ್ಯಾಕ್ಸ್ ಮುಲ್ಲರ್ ಹೈಸ್ಕೂಲ್(ಬಸವೇಶ್ವರನಗರ) ಪರವಾಗಿ ಆಡುತ್ತಿದ್ದಾರೆ. ಸದ್ಯ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ನಿತೀನ್‌, 3 ವರ್ಷ ವಯಸ್ಸಿನಲ್ಲಿ ಇದ್ದಾಗಲೇ ಕ್ರಿಕೆಟ್ ಆಡಲು ಪ್ರಾರಂಭಿಸಿದರು.

Related posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

April 26, 2026
ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026

ಸದ್ಯ ಕೆಎಸ್‌ಸಿಎ ಆಯೋಜಿಸಿರುವ 16 ವರ್ಷದೊಳಗಿನ KSCA ಕಪ್ ಪಂದ್ಯಾವಳಿಯಲ್ಲಿ ಅದ್ಭುತ ಬ್ಯಾಟಿಂಗ್‌ನಿಂದ ಮಿಂಚಿದ ನಿತೀನ್‌ ಆರ್ಯ, 3 ಶತಕ ಮತ್ತು 3 ಅರ್ಧಶತಕಗಳೊಂದಿಗೆ 565 ರನ್‌ಗಳಿಸಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿದರು. ತಮ್ಮ ಈ ಶ್ರೇಷ್ಠ ಬ್ಯಾಟಿಂಗ್‌ನಿಂದ ಅಂಡರ್‌-16 ಟೂರ್ನಿಯ ಬ್ಯಾಟರ್‌ಗಳ ಸಾಲಿನಲ್ಲಿ ಅಗ್ರಸ್ಥಾನ ಪಡೆದು ಮಿಂಚಿರುವುದು ನಿಜಕ್ಕೂ ದೊಡ್ಡ ಸಾಧನೆಯಾಗಿದೆ. ಅಷ್ಟೇ ಅಲ್ಲದೇ, ಕೆಎಸ್‌ಸಿಎ ನಡೆಸುತ್ತಿರುವ 14 ವರ್ಷದೊಳಗಿನವರ ಟೂರ್ನಿಗಳಲ್ಲೂ ಸಹ ನಿತೀನ್‌ ಆರ್ಯ, ಸತತವಾಗಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನ ನೀಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ.

Nitish Arya

ನಿತೀಶ್ ಅವರು ವಿಕ್ಟರಿ ಕ್ರಿಕೆಟ್ ಕ್ಲಬ್‌ಗಾಗಿ ಕೆಎಸ್‌ಸಿಎಯ 4ನೇ ಡಿವಿಷನ್ ಲೀಗ್‌ನಲ್ಲಿ ಆಡುತ್ತಿದ್ದಾರೆ. ಈವರೆಗೆ, ಅವರು 4 ಪಂದ್ಯಗಳಲ್ಲಿ ಒಂದು ಅರ್ಧಶತಕದೊಂದಿಗೆ ಅಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ನಿತೀನ್‌ ಆರ್ಯ ಅವರಲ್ಲಿ ಟ್ಯಾಲೆಂಟ್‌ ಗಮನಿಸಿದ ರಾಜಾಜಿನಗರ ಕ್ರಿಕೆಟರ್ಸ್ ಕಾರ್ಯದರ್ಶಿ ಮತ್ತು ಕರ್ನಾಟಕ ಪ್ರೀಮಿಯರ್ ಲೀಗ್‌ನ (ಕೆಪಿಎಲ್) ಶಿವಮೊಗ್ಗ ಲಯನ್ಸ್ ತಂಡದ ಮಾಲೀಕ ಆರ್.ಕುಮಾರ್ ಅವರು ಕಿರಿಯ ಆಟಗಾರ ನಿತೀಶ್‌ ಅವರ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ.

ನಿತೀಶ್‌ ಆರ್ಯ, ರಾಜಾಜಿನಗರ ಕ್ರಿಕೆಟಿಗರ ತರಬೇತುದಾರ ಎನ್‌ಪಿ ವಿನಯ್ ಕುಮಾರ್ ಅವರ ಗರಡಿಯಲ್ಲಿ ಬೆಂಗಳೂರಿನ ಮಾಗಡಿ ರಸ್ತೆಯ ಈಸ್ಟ್ ವೆಸ್ಟ್ ಸೆಂಟರ್ ಫಾರ್ ಸ್ಪೋರ್ಟಿಂಗ್ ಎಕ್ಸಲೆನ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾನೆ. ತಮ್ಮ ಆಟಗಾರನ ಟ್ಯಾಲೆಂಟ್‌ ಬಗ್ಗೆ ಮಾತನಾಡಿರುವ ವಿನಯ್‌ ಕುಮಾರ್‌, ನಿತೀಶ್‌ ಆರ್ಯ, ಡೆಡಿಕೇಟೆಡ್‌ ಕ್ರಿಕೆಟರ್‌ ಆಗಿರುವ ನಿತೀಶ್‌, ಪ್ರತಿನಿತ್ಯ 6 ರಿಂದ 7 ಗಂಟೆಗಳ ಕಾಲ ತರಬೇತಿಯಲ್ಲಿ ತೊಡಗಿಸಿಕೊಳ್ಳುತ್ತಾನೆ. ಬೆಳಗ್ಗೆ 5 ರಿಂದ 7ರವರೆಗೆ ಮತ್ತು ಸಂಜೆ 3 ರಿಂದ ಸಂಜೆ 7 ಗಂಟೆಯವರೆಗೆ ತರಬೇತಿ ನೀಡುತ್ತಾರೆ. ಆತ ಹಲವು ಗಂಟೆಗಳ ಕಾಲ ನೆಟ್ಸ್‌ನಲ್ಲಿ ಹೆಚ್ಚಿನ ಸಮಯವನ್ನ ಕಳೆಯಲಿದ್ದು, ತಾಂತ್ರಿಕವಾಗಿ ಆತ ಬಲಿಷ್ಠವಾಗಿದ್ದಾನೆ. ಅಲ್ಲದೇ ಆತ ಬ್ಯಾಕ್‌ಫುಟ್‌ ಮತ್ತು ಫ್ರಂಟ್‌ಫುಟ್‌ ಎರಡರಲ್ಲೂ ರನ್‌ಗಳಿಸಬಲ್ಲ ಎನ್ನುತ್ತಾರೆ.

Nitish Arya

ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿಯ ದೊಡ್ಡ ಅಭಿಮಾನಿಯಾಗಿರುವ ನಿತೀಶ್‌ ಆರ್ಯ, ಭವಿಷ್ಯದಲ್ಲಿ ಟೀಂ ಇಂಡಿಯಾ ಆಟಗಾರನಾಗಿ ಮೂರು ಫಾರ್ಮ್ಯಾಟ್‌ನಲ್ಲಿ ಮಿಂಚಬೇಕೆಂಬ ಮಿಂಚುವ ಕನಸು ಹೊತ್ತಿದ್ದಾರೆ. 13 ವರ್ಷದ ನಿತೀಶ್‌ ಕೇವಲ ಕ್ರಿಕೆಟ್‌ನಲ್ಲಿ ಮಾತ್ರವೇ ಯಶಸ್ಸು ಸಾಧಿಸದೆ, ಶೈಕ್ಷಣಿಕವಾಗಿಯೂ ಉತ್ತಮ ಅಂಕಗಳಿಸಿದ್ದಾನೆ. ಕ್ರಿಕೆಟ್‌ನ ಜೊತೆ ಜೊತೆಗೆ ಓದಿನ ಬಗ್ಗೆಯೂ ಆಸಕ್ತಿ ಹೊಂದಿರುವ ನಿತೀಶ್‌, 80-90% ಅಂಕ ಪಡೆದಿದ್ದಾನೆ ಎನ್ನುತ್ತಾರೆ ಆತನ ಶಾಲಾ ತಂಡದ ಕೋಚ್‌ ಲಕ್ಷ್ಮಿಕಾಂತ್‌.

Nitish Arya

ನಿತೀಶ್‌ ಆರ್ಯ ಹಿನ್ನೆಲೆ:
ತಂದೆ: ಲೋಕೇಶ್‌
ಜನನ: 13-09-2010
ಕೋಚ್‌: ಎನ್‌.ಪಿ. ವಿನಯ್‌ ಕುಮಾರ್‌
ಕ್ಲಬ್‌: ರಾಜಾಜಿನಗರ್‌ ಕ್ರಿಕೆಟರ್ಸ್‌
ಕ್ಲಬ್‌ ಕಾರ್ಯದರ್ಶಿ: ಕೆಪಿಎಲ್‌ ಟೂರ್ನಿಯ ಶಿವಮೊಗ್ಗ ಲಯನ್ಸ್‌ ತಂಡದ ಮಾಲೀಕ ಆರ್‌.ಕುಮಾರ್‌

ನಿತೀಶ್‌ ಆರ್ಯ ಪ್ರದರ್ಶನ – KSCA ಕಪ್‌ನಲ್ಲಿ
ಟಾಪ್‌ ಸ್ಕೋರರ್‌ – 565 ರನ್‌ಗಳು (3 ಶತಕ, 3 ಅರ್ಧಶತಕ)

1ನೇ ಡಿವಿಷನ್‌ ಲೀಗ್‌ನಲ್ಲಿ
ಪಂದ್ಯಗಳು – 4
ಇನ್ನಿಂಗ್ಸ್‌ – 7
ರನ್‌ಗಳು – 355
50/100 – 1/3
ಸೂಪರ್‌ ಲೀಗ್‌ನಲ್ಲಿ
ಪಂದ್ಯಗಳು – 3
ಇನ್ನಿಂಗ್ಸ್‌ – 3
ರನ್‌ಗಳು – 210
50/100 – 2/1

ಕೆಎಸ್‌ಸಿಎ ಇಂಟರ್‌ ಕ್ಲಬ್‌ ಪಂದ್ಯಾವಳಿಯಲ್ಲಿ – ಅಂಡರ್‌-14
ಪಂದ್ಯಗಳು – 4
ಇನ್ನಿಂಗ್ಸ್‌ – 4
ರನ್‌ಗಳು – 355
ಸರಾಸರಿ – 177.50
50/100 – 1/2

Cricket, Nitish Arya, KSCA tournaments, Banglore,

Tags: bangloreCricketKSCA tournamentsNitish Arya
ShareTweetSendShare
Join us on:

Related Posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram