Cricket : ಕೊನೆಯ ಏಕದಿನ ಪಂದ್ಯವನ್ನು ಭಾರತ ಗೆಲ್ಲಬೇಕಿದೆ – ಗವಾಸ್ಕರ್
ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭಾರತ ಸೋತಿದೆ. ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿರುವ ಭಾರತಕ್ಕೆ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲುವುದು ಅತಿ ಮುಖ್ಯವಾಗಿದೆ ಎಂದು ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ.
ಏಕದಿನ ಪಂದ್ಯಗಳ ಸರಣಿಯ ನಂತರ ಉಭಯ ತಂಡಗಳ ನಡುವೆ ಎರಡು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದ್ದು, ಟೆಸ್ಟ್ ಸರಣಿಗೆ ಆತ್ಮವಿಶ್ವಾಸ ಮೂಡಿಸಲು ಅಂತಿಮ ಏಕದಿನ ಪಂದ್ಯವನ್ನು ಗೆಲ್ಲುವ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.
ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವು ಡಿಸೆಂಬರ್ 10 ಶನಿವಾರದಂದು ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆಯಲಿದೆ.
ನಾಯಕ ರೋಹಿತ್ ಶರ್ಮಾ ತೃತೀಯ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದು, ತಂಡದ ನಾಯಕನ ಜವಾಬ್ದಾರಿ ಉಪ ನಾಯಕ ಕೆಎಲ್ ರಾಹುಲ್ ವಹಿಸಲಿದ್ದಾರೆ.
Cricket: India have to win the last ODI match – Gavaskar