ಗಂಡನಿಂದ ಕಿರುಕುಳಕ್ಕೆ ಒಳಗಾದ ಕನ್ನಡ ಖ್ಯಾತ ಕಿರುತೆರೆ ನಟಿಗೆ
ಸ್ಯಾಂಡಲ್ ವುಡ್ ನ ಕಿರುತೆರೆಯ ನಟಿ ದಿವ್ಯಾ ಶ್ರೀಧರ್ ಗೆ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಡನಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ನಟಿ. ಪತಿ ಅರ್ನವ್ (ಅರ್ನವ್) ಅಲಿಯಾಸ್ ಅಮ್ಜದ್ ಖಾನ್ ವಿರುದ್ಧ ವಿಡಿಯೋ ಮಾಡಿದ್ದಾರೆ.
ವಿಡಿಯೋದಲ್ಲಿ ‘ನಾನು ಮತ್ತು ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ಇತ್ತೀಚೆಗೆ ಮದುವೆಯಾಗಿದ್ದೇವೆ. 2017ರಿಂದ ನಾನು ಮತ್ತು ಅರ್ನವ್ ಇಬ್ಬರೂ ಲಿವಿಂಗ್ ಟು ಗೆದರ್ನಲ್ಲಿ 5 ವರ್ಷದಿಂದ ನಾವು ಒಟ್ಟಿಗೆ ಇದ್ದೇವೆ.
ಮನೆಗೆ ನಾನೇ ಹಣಕಾಸಿನ ನೆರವು ನೀಡಿದ್ದೇನೆ. ಮದುವೆಗಿಂತ ಮೊದಲು ಲಾಕ್ಡೌನ್ ಟೈಂನಲ್ಲಿ ಅವನಿಗೆ ಏನು ಕೆಲಸವಿಲ್ಲ. ಆಗ 30 ಲಕ್ಷ ಲೋನ್ ಕೊಡಿಸಿ, 30 ಸಾವಿರದಂತೆ ಲೋನ್ ಕಟ್ಟಿದ್ದೇನೆ.
ಅವನನ್ನು ನಾನೇ ಸಾಕಿದ್ದೇನೆ. ಮಗುವಿನ ತರಹ ಅವನಿಗೆ ಏನೂ ಆಗದಂತೆ ಜೋಪಾನವಾಗಿ ನೋಡಿದೆ. ಆದರೆ, ಅವನಿಂದಲೇ ಕಿರುಕುಳ (Harassment) ಉಂಟಾಗಿದೆ’ ‘ನಿನ್ನೆ ನನ್ನ ಗಂಡ ಹಲ್ಲೆ ಮಾಡಿದ್ದಾನೆ. ಕೆಳಗೆ ಬಿದ್ದಿದ್ರಿಂದ ಹೊಟ್ಟೆಯ ಭಾಗಕ್ಕೆ ನೋವಾಗಿದೆ.
ಕೈಕಾಲಿನೆಲ್ಲಾ ತುಳಿದ ಕಾರಣ ನೋವು ತಡೆಯಲಾಗದೇ ಪೇಚಾಡಿದೆ. ಆಗ ಲೋ ಬಿಪಿಯಾಗಿ ಅಸ್ವಸ್ಥಳಾಗಿದ್ದೆ. ತುಂಬಾ ಸಮಯವಾದ ಮೇಲೆ ನನಗೆ ಪ್ರಗ್ನೆ ಬಂತು. ನನ್ನ ಗಂಡ ಮನೆಯಲ್ಲೇ ಇದ್ದ. ಆದರೂ ನನ್ನನ್ನು ಆಸ್ಪತ್ರೆಗೆ ಸೇರಿಸಿಲ್ಲ. ನನಗೆ ಪ್ರಗ್ನೆ ಬಂದ ಮೇಲೆ ಮನೆಯಿಂದ ಹೊರಗೆ ಹೋದ, ನೋವಿನ ಹೊಟ್ಟೆಯಿಂದ ನಾನು ನರಳಿದೆ. ಮರುದಿನ ಬೆಳಗ್ಗೆ ಅತೀವ ರಕ್ತಸ್ರಾವ ವಾಯ್ತು. ನನ್ನ ಗಂಡನಿಗೆ ಕರೆ ಮಾಡಿದೆ. ಅವನು ಬೇರೆ ಅಪಾರ್ಟ್ಮೆಂಟ್ನಲ್ಲಿ ಇದ್ದಾನೆ ಎಂದು ಹೇಳಿದ್ರು’
ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಗೆ ತುಂಬಾ ಪೆಟ್ಟಾಗಿರೋದ್ರಿಂದ ಯಾವಾಗ ಬೇಕಿದ್ದರು ಗರ್ಭಪಾತ ಆಗಬಹುದು ಎಂದು ವೈದ್ಯರು ಹೇಳಿದ್ದಾರಂತೆ. ‘ಅವನಿಗಾಗಿ ನಾನು ಎಲ್ಲವನ್ನೂ ಮಾಡಿದ್ದೇನೆ. ಆದರೆ ಅವನು ನನ್ನ ನಂಬರ್ ಬ್ಲಾಕ್ ಮಾಡಿದ್ದಾನೆ. ನನ್ನ ಮೆಸೇಜ್ಗೆ ರಿಪ್ಲೈ ಕೂಡ ಮಾಡ್ತಿಲ್ಲ. ನನಗೆ ನನ್ನ ಗಂಡ ಬೇಕು. ನನ್ನ ಮಗುವಿಗೆ ಏನೂ ಆಗಬಾರದು ಎಂದು ಪ್ರಾರ್ಥಿಸುತ್ತೇನೆ’ ಎಂದು ದಿವ್ಯಾ ಶ್ರೀಧರ್ ಹೇಳಿದ್ದಾರೆ.
ದಿವ್ಯಾ ಶ್ರೀಧರ್ ವಿಚಿತ್ರ ಪ್ರೇಮಿ, ಹುಚ್ಚುಡುಗಿ, ಹೀಗೂ ಉಂಟಾ, ಸಾಚಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದು, ಆಕಾಶ ದೀಪಧಾರಾವಾಹಿಯ ಮೂಲಕ ಸಖತ್ ಫೇಮಸ್ ಆಗಿದ್ದವರು. ಇದೀಗ ತಮಿಳು ಧಾರಾವಾಹಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ದಿವ್ಯಾ ಶ್ರೀಧರನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Crime-A famous Kannada television actress who was